Saturday, June 28, 2025
spot_imgspot_img
spot_imgspot_img

ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ; ಓರ್ವ ಸಾವು..!

- Advertisement -
- Advertisement -

ಚಿಕ್ಕಮಗಳೂರು: ಗೊಬ್ಬರ ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಮೂಡಿಗೆರೆ ತಾಲೂಕಿನ ಒಕ್ಕಳ್ಳಿ ಬಳಿ ನಡೆದಿದೆ.

ಮೃತಪಟ್ಟ ವ್ಯಕ್ತಿ ಟ್ರ್ಯಾಕ್ಡರ್ ನಲ್ಲಿದ್ದ ಸತೀಶ್ (28) ಎಂದು ಗುರುತಿಸಲಾಗಿದೆ.

ರಸ್ತೆಯ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ ಹೊಡೆದಿದೆ. ಟ್ರ್ಯಾಕ್ಡರ್ ನಲ್ಲಿದ್ದ ಸತೀಶ್ಸ್ಥಳದಲ್ಲೇ ಸಾವನ್ನಪ್ಪಿದ್ದು, ಟ್ರ್ಯಾಕ್ಟರ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಬಣಕಲ್ ನಿಂದ ಸಾರಗೋಡು ಗ್ರಾಮಕ್ಕೆ ಹೋಗುತ್ತಿದ್ದ ಈ ಘಟನೆ ಸಂಭವಿಸಿದೆ. 50 ಚೀಲಕ್ಕೂ ಹೆಚ್ಚು ಗೊಬ್ಬರ ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ ಹೊಡೆದಿದೆ. ಟ್ರ್ಯಾಕ್ಟರ್ ಪಲ್ಟಿಯಾದ ರಭಸಕ್ಕೆ ಸಂಪೂರ್ಣ ಮಗುಚಿ ಬಿದ್ದಿದೆ.ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!