Saturday, June 28, 2025
spot_imgspot_img
spot_imgspot_img

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು : ಚಾಲಕ ಸೇರಿದಂತೆ ಮೂವರಿಗೆ ಗಾಯ

- Advertisement -
- Advertisement -

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಚರಂಡಿಗೆ ಬಿದ್ದು ಚಾಲಕ ಸೇರಿದಂತೆ ಮೂವರು ಗಾಯಗೊಂಡ ಘಟನೆ ಜಕ್ರಿ ಬೆಟ್ಟು ಮಣ್ಣಾಪು ಎಂಬಲ್ಲಿ ಇಂದು ಸಂಜೆ ನಡೆದಿದೆ.

ಘಟನೆಯಲ್ಲಿ ಕೇರಳ ನಿವಾಸಿಗಳಾದ ಅರುಣ್, ಪ್ರಮೋದ್ ಮತ್ತು ಅರುಣ್ ಎಂಬವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ‌ಹೊರರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಟ್ರಾಫಿಕ್ ಪೊಲೀಸರು ಚಾಲಕನ ಬಗ್ಗೆ ಮಾಹಿತಿ ಪಡೆದು ವಿಚಾರಿಸಿದಾಗ ಆತ ಅಮಲು ಪದಾರ್ಥ ಸೇವಿಸಿ ಅಜಾಗರೂಕತೆಯಿಂದ ಚಾಲನೆ ಮಾಡಿರುವುದು ಸಾಬೀತಾಗಿದೆ. ಈ ಕಾರಣದಿಂದಾಗಿ ಡ್ರಿಂಕ್ ಎಂಡ್ ಡ್ರೈವ್ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಟ್ರಾಫಿಕ್ ಎಸ್.ಐ.ಸುತೇಶ್ ತಿಳಿಸಿದ್ದಾರೆ.
ಚಿಕ್ಕಮಗಳೂರು ‌ಕಡೆಯಿಂದ ಕೇರಳಕ್ಕೆ ಹೋಗುವ ಸಂದರ್ಭದಲ್ಲಿ ಅತೀ ವೇಗವಾಗಿ ಹಾಗೂ ಅಮಲು ಪದಾರ್ಥ ಸೇವಿಸಿದ ಪರಿಣಾಮವಾಗಿ ಕಾರು ನಿಯಂತ್ರಣ ಕಳೆದುಕೊಂಡು ಚರಂಡಿಗೆ ಬಿದ್ದಿದೆ ಎನ್ನಲಾಗಿದೆ.

- Advertisement -

Related news

error: Content is protected !!