Friday, June 27, 2025
spot_imgspot_img
spot_imgspot_img

ಜಮೀನಿಗೆ ಏಕಾಏಕಿ ಬೆಂಕಿ; ಆರಿಸಲು ಹೋದ ರೈತ ಸಾವು..!

- Advertisement -
- Advertisement -

ಜಮೀನಿಗೆ ಬಿದ್ದ ಬೆಂಕಿ ಆರಿಸಲು ಹೋದ ರೈತ ಸಾವನ್ನಪ್ಪಿರುವ ದಾರಣ ಘಟನೆ ಹಾಸನ ಹೊಳೆನರಸೀಪುರ ತಾಲ್ಲೂಕಿನ ದೊಡ್ಡಕುಂಚೇವು ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟ ರೈತ ಕೃಷ್ಣೇಗೌಡ (62) ಎಂದು ಗುರುತಿಸಲಾಗಿದೆ.

ಜಮೀನಿನ ಬದುವಿನಲ್ಲಿ ಏಕಾಏಕಿ ಒಣ ಹುಲ್ಲಿಗೆ ಬೆಂಕಿ ತಗುಲಿಕೊಂಡಿದೆ. ತೋಟಕ್ಕೆಲ್ಲಾ ಬೆಂಕಿ ವ್ಯಾಪಿಸುತ್ತದೆ ಎಂದು ಕೃಷ್ಣೇಗೌಡ ಬೆಂಕಿ ನಂದಿಸಲು ಹೋಗಿದ್ದಾರೆ. ಈ ವೇಳೆ ಜೋರಾಗಿ ಉರಿಯುತ್ತಿದ್ದ ಬೆಂಕಿಗೆ ಕೃಷ್ಣೇಗೌಡ ಸಿಲುಕಿಕೊಂಡಿದ್ದಾರೆ. ಸುಟ್ಟ ಗಾಯಗಳಿಂದ ಕೃಷ್ಣೇಗೌಡ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ.

ಕೂಡಲೇ ಗ್ರಾಮಸ್ಥರು ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹೊಳೆನರಸೀಪುರ ತಾಲೂಕಿನ ಆಸ್ಪತ್ರೆಗೆ ದಾಖಲಾಗಿದೆ. ಆದರೆ ಚಿಕಿತ್ಸೆಗೆ ಫಲಕಾರಿಯಾಗದೆ ಕೃಷ್ಣೇಗೌಡ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

- Advertisement -

Related news

error: Content is protected !!