Sunday, June 29, 2025
spot_imgspot_img
spot_imgspot_img

ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿಗೆ ಬೈಕ್‌ ಡಿಕ್ಕಿ; ದಾರುಣ ಸಾವು

- Advertisement -
- Advertisement -

ತಾಯಿ ಜೊತೆ ದೇವಸ್ಥಾನಕ್ಕೆ ತೆರಳಿ ವಾಪಸ್ ಮನೆಗೆ ನಡೆದುಕೊಂಡು ಬರುತ್ತಿದ್ದ ಬಾಲಕಿಗೆ ಬೈಕ್ ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಬಳಿಯ ಪಂವಚಟಿ ಶಾಲೆ ಬಳಿ ಈ ಅಪಘಾತ ನಡೆದಿದ್ದು, ಮುದ್ದೇನಹಳ್ಳಿ ಗ್ರಾಮದ ಕಾಂತರಾಜು ಮತ್ತು ಶ್ಯಾಮಲ ದಂಪತಿಯ ಮಗಳು ಜಾನುಶ್ರೀ (7) ಮೃತಪಟ್ಟಿದ್ದಾಳೆ. ಮುದ್ದೇನಹಳ್ಳಿಯ ಪಂಚವಟಿ ಶಾಲೆ ಬಳಿ ಬಾಲಕಿಗೆ ಬೈಕ್ ಡಿಕ್ಕಿ ಹೊಡೆದಿದ್ದು, ತಾಯಿಯೊಂದಿಗೆ ದೇವಸ್ಥಾನಕ್ಕೆ ಹೋಗಿ ನಡೆದುಕೊಂಡು ಬರುವ ವೇಳೆ ಅಪಘಾತ ಸಂಭವಿಸಿದೆ.

ಹಿಂಬದಿಯಿಂದ ಅತಿವೇಗವಾಗಿ ಬಂದ ಬೈಕ್ ಬಾಲಕಿಗೆ ಡಿಕ್ಕಿ ಹೊಡೆದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಜಾನುಶ್ರೀಗೆ ಸತ್ಯಸಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಜಾನುಶ್ರೀ ಸಾವನ್ನಪ್ಪಿದ್ದಾಳೆ. ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಬಾಲಕಿಯ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಬೈಕ್ ಸವಾರನ ವಿರುದ್ಧ ನಂದಿಗಿರಿಧಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!