- Advertisement -
- Advertisement -


ಹೋಟೆಲ್ ಮ್ಯಾನೇಜರ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ.
ಮೃತರನ್ನು ಶ್ರೀನಂದಿ ವೈಭವ್ ಹೊಟೇಲ್ ಮ್ಯಾನೇಜರ್ ಸನ್ನಿಧಿ(24) ಎಂದು ಗುರುತಿಸಲಾಗಿದೆ.
ಹೋಟೆಲ್ ಪಕ್ಕದ ಜಾಗದಲ್ಲಿ ಕಬ್ಬಿಣದ ಆಯಂಗಲ್ಗೆ ಸ್ಕ್ರೀನ್ ಬಟ್ಟೆಯಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ವ್ಯವಹಾರದಲ್ಲಿ ಮನಸ್ಸಿಗೆ ಬೇಜಾರು ಮಾಡಿಕೊಂಡು ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಕುರಿತು ಮೃತರ ಅಕ್ಕ ಶ್ರೀನಿಧಿಶೆಟ್ಟಿ ಎಂಬುವವರು ನೆಲಮಂಗಲ ಟೌನ್ ಠಾಣೆಗೆ ದೂರು ನೀಡಿದ್ದು, ಆತ್ಮಹತ್ಯೆ ಬಗ್ಗೆ ಯಾವುದೇ ಅನುಮಾನ ಇಲ್ಲವೆಂದು ಹೇಳಿಕೆ ಕೊಟ್ಟಿದ್ದಾರೆ.
- Advertisement -