- Advertisement -
- Advertisement -
ಪುತ್ತೂರು: ಹಾಡಹಗಲೇ ಮನೆಯೊಂದರ ಬೀಗ ಮುರಿದು ಕಳ್ಳತನ ನಡೆಸಿರುವ ಘಟನೆ ಬನ್ನೂರಿನಲ್ಲಿ ನಡೆದಿದೆ.
ಮನೆಯಲ್ಲಿ ಯಾರೂ ಇಲ್ಲದ ವೇಳೆ ಬನ್ನೂರು ಕುಂಟ್ಯಾನ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಮೌನಿಶ್ ಎಂಬವರ ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಲಾಗಿದೆ.
ಬೆಳಿಗ್ಗೆ ಮನೆಯವರು ಬೀಗಹಾಕಿ ಕೆಲಸದ ನಿಮಿತ್ತ ಹೊರಹೋಗಿದ್ದು , ಮನೆಮಂದಿ ಹಿಂದಿರುಗಿ ಬಂದಾಗ ಮನೆ ಹಿಂಭಾಗ ಬೀಗ ಮುರಿದು ಕಳ್ಳರು ಒಳಹೊಕ್ಕು ಕಳ್ಳತನ ಮಾಡಿರುವುದು ಗಮನಕ್ಕೆ ಬಂದಿದೆ. ಮನೆಯ ವಸ್ತುಗಳೆಲ್ಲಾ ಚಿಲ್ಲಾಪಿಲ್ಲಿಯಾಗಿ ಬಿದ್ದಿದ್ದು , ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ಬೆರಳಚ್ಚು ತಜ್ಞರು ಮತ್ತು ಶ್ವಾನದಳ ಘಟನಾ ಸ್ಥಳಕ್ಕೆ ಆಗಮಿಸಿದ್ದು , ತನಿಖೆ ನಡೆಯುತ್ತಿದೆ.
- Advertisement -