Thursday, May 2, 2024
spot_imgspot_img
spot_imgspot_img

ಮಾರಕಾಸ್ತ್ರದಿಂದ ಹೊಡೆದು ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಪತಿ..!!

- Advertisement -G L Acharya panikkar
- Advertisement -

ಹಣಕಾಸಿನ ವಿಚಾರದಲ್ಲಿ ಜಗಳ ನಡೆದು ಗಂಡ ಬಲವಾದ ಆಯುಧದಿಂದ ಹೆಂಡತಿಗೆ ಹೊಡೆದು ಹತ್ಯೆ ಮಾಡಿರುವ ಘಟನೆ ಚಾಮರಾಜನಗರ ತಾಲೂಕಿನ ಮಂಗಲ ಹೊಸೂರು ಗ್ರಾಮದಲ್ಲಿ ನಡೆದಿದೆ.

ತಮಿಳುನಾಡು ಮೂಲದ ರಾಧಿಕಾ (22) ಮೃತರು ಗೃಹಿಣಿ. ಕೃತ್ಯ ವೆಸಗಿದ ಪತಿ ಕಾರ್ತಿಕ್, ಸದ್ಯ ಪೊಲೀಸರ ವಶದಲ್ಲಿದ್ದಾನೆ. ಈ ದಂಪತಿಗೆ 10 ತಿಂಗಳ ಹೆಣ್ಣು ಮಗುವಿದೆ. ದಂಪತಿಗಳು ಮಂಗಲ ಹೊಸೂರು ಗ್ರಾಮದಲ್ಲಿ ಜಮೀನು ಅನ್ನು ಗುತ್ತಿಗೆ ಪಡೆದುಕೊಂಡು ವ್ಯವಸಾಯವನ್ನು ಮಾಡುತ್ತಿದ್ದರು.

ರಾತ್ರಿ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಜಗಳ ನಡೆದಿದೆ. ಈ ವೇಳೆ ಕೋಪದಲ್ಲಿದ್ದ ಗಂಡ ಯಾವುದೋ ಬಲವಾದ ಆಯುಧದಿಂದ ಹೆಂಡತಿಯ ತಲೆಗೆ ಹೊಡೆದ ಪರಿಣಾಮ ಸಾವನ್ನಪ್ಪಿದ್ದಾಳೆ. ಈ ಸಂಬಂಧ ಡಿವೈಎಸ್​ಪಿ ಲಕ್ಷ್ಮಯ್ಯ, ಸರ್ಕಲ್ ಇನ್​ಸ್ಪೆಕ್ಟರ್​ ಬಸವರಾಜ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!