- Advertisement -
- Advertisement -
ಸೀರೆಯಿಂದ ಕತ್ತು ಬಿಗಿದು ಪತಿಯೇ ಪತ್ನಿಯನ್ನು ಕೊಲೆಗೈದ ಘಟನೆ ಬೆಂಗಳೂರು ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆ ನೇತ್ರಾವತಿ ಹತ್ಯೆ ಮಾಡಿ ಪತಿ ವೆಂಕಟೇಶ್ ಎಂದು ಗುರುತಿಸಲಾಗಿದೆ.
ನೇತ್ರಾವತಿ ರಾತ್ರಿ ಹತ್ಯೆ ಮಾಡಿ ವೆಂಕಟೇಶ್ ಎಸ್ಕೆಪ್ ಆಗಿದ್ದಾರೆ. ಬೆಳಗ್ಗೆ ಪಕ್ಕದ ಮನೆಯವರು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವೆಂಕಟೇಶ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕ್ರೇನ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ವೆಂಕಟೇಶ್ ಕುಡಿದು ಗಲಾಟೆ ಮಾಡುತ್ತಿದ್ದ. ನೇತ್ರಾವತಿ ಗಾರ್ಮೆಂಟ್ನಲ್ಲಿ ಕೆಲಸ ಮಾಡುತ್ತಿದ್ದರು. ಮಾಗಡಿಯ ಗೇರುಪುರ ಮೂಲದ ವೆಂಕಟೇಶ್ ದಂಪತಿ ನಾಲ್ಕು ವರ್ಷಗಳಿಂದ ಕಾಮಾಕ್ಷಿಪಾಳ್ಯದ ರಂಗನಾಥಪುರದಲ್ಲಿ ವಾಸವಾಗಿದ್ದರು.
- Advertisement -