Monday, May 6, 2024
spot_imgspot_img
spot_imgspot_img

ಸಾಲ ತೀರಿಸಲು ಹಣ ನೀಡದಿದ್ದಕ್ಕೆ ಪತ್ನಿಯನ್ನೇ ಕೊಲೆಗೈದ ಪತಿರಾಯ..!

- Advertisement -G L Acharya panikkar
- Advertisement -

ಸಾಲ ತೀರಿಸಲು ಹಣ ನೀಡದಿದ್ದಕ್ಕೆ ಪತ್ನಿಯನ್ನೇ ಪತಿ ಕೊಲೆ ಮಾಡಿರುವ ಘಟನೆ ಮೈಸೂರಿನ ರಾಜೀವ್ ನಗರದಲ್ಲಿ ನಡೆದಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಕೊಲೆ ಮಾಡಿರುವ ಆರೋಪಿ ಪತಿ ಅಕ್ಷರ್ ಅಲಿ ಹಾಗೂ ಮೃತ ಮಹಿಳೆ ನವೀದಾ ಎಂದು ಗುರುತಿಸಲಾಗಿದೆ.

ಮಂಡ್ಯ ಮೂಲದ ಅಕ್ಟರ್ ಅಲಿ ಅಟೋ ಚಾಲಕನಾಗಿದ್ದನು. ನವೀದಾ ಆಕ್ಟರ್ ಅಲಿ ಮದುವೆ ಆಗಿ 13 ವರ್ಷಗಳಾಗಿವೆ ದಂಪತಿಗೆ ಮೂವರು ಮಕ್ಕಳಿದ್ದು, ಮೈಸೂರಿನ ರಾಜೀವ ನಗರದಲ್ಲಿ ನೆಲೆಸಿದ್ದರು.

ಆಕ್ಟರ್ ಅಲಿ ಗೂಡ ಆಟೋ ಪ್ರಾವಿಷನ್ ಸ್ಮಾಲ್ ಆಟೋ ಮೊಬೈಲ್ಸ್ ಅಂಗಡಿ ಹೀಗೆ ಹಲವು ವ್ಯಾಪಾರ ಮಾಡಲು ಆರಂಭಿಸಿದನು. ಇದಕ್ಕಾಗಿ ಹಲವಡೆ ಸಾಲ ಮಾಡಿದ್ದನು. ಮತ್ತು ನವೀದಾ ತವರು ಮನೆಯವರು ಕೂಡ ಅಕ್ಕರ್ ಅಲಿಗೆ ಆರ್ಥಿಕ ಸಹಾಯ ಮಾಡುತ್ತಿದ್ದರು. ಈ ಮಧ್ಯೆ ನವೀದಾ ಸಣ್ಣ ಅಂಗಡಿ ನಡೆಸುತ್ತಿದ್ದು, ಹಲವು ಬಾರಿ ಪತಿಯ ಸಾಲ ತೀರಿಸಿದ್ದಳು. ಆದರು ಕೂಡ ಅಕ್ಷರ್ ಆಲಿ ಪದೇ ಪದೇ ಸಾಲ ಮಾಡುತ್ತಿದ್ದನು. ಈ ಸಾಲವನ್ನು ತೀರಿಸಲು ಹಣ ನೀಡು ಎಂದು ಅಕ್ಟ‌ರ್ ಆಲಿ ಪತ್ನಿ ನವೀದಾಗೆ ಕಿರುಕುಳ ಕೊಡುತ್ತಿದ್ದನು.

ಇದೇ ವಿಚಾರಕ್ಕೆ ಫೆ.4ರಂದು ದಂಪತಿ ನಡುವೆ ಜಗಳ ಆಗಿತ್ತು. ಜಗಳ ವಿಕೋಪಕ್ಕೆ ಅಕ್ಷರ್ ಪತ್ನಿ ನವೀದಾರ ಕತ್ತು ಹಿಸುಕಿ ಕೊಲೆ ಮಾಡಿದ್ದಾನ ಎಂದು ತಿಳಿದು ಬ೦ದಿದೆ. ಸಂಜೆಯಾದರೂ ನವೀದಾ ಕಾಣದಿದ್ದಾಗ ಮತ್ತು ಸಂಪರ್ಕಕ್ಕೆ ಸಿಗದಿದ್ದಾಗ ಆಕ್ಟರ್ ಅಲಿಯನ್ನು ಕುಟುಂಬಸ್ಥರು ಪುಶ್ನಿಸಿದ್ದಾರೆ. ಆಗ ಅಕ್ಟರ್ ಅಲಿ ತಂದೆ ಮನೆಗೆ ಹೋಗಿದ್ದಾಳ, ಅಂಗಡಿಯಲ್ಲಿ ಇದ್ದಾಳ ಎಂದು ಉತ್ತರ ನೀಡಿದಾನೆ ಎನ್ನಲಾಗಿದೆ. ಕುಟುಂಬಸ್ಥರು ಅನುಮಾನಗೊಂಡು ಮನೆಗೆ ಹಾಕಿದ್ದ ಬೀಗವನ್ನು ಒಳಗೆ ಹೋದಾಗ ನವೀದಾ ಆತ್ಮಸ್ಮರಾಗಿ ಬಿದ್ದಿದ್ದರು. ಕುತ್ತಿಗೆ ಮೇಲೆ ಗಾಯದ ಗುರುತುಗಳು ಇದ್ದವು. ಕೂಡಲೆ ಖಾಸಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯ ನವೀದಾ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಈ ಕುರಿತು ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಪ್ರತಿ ಅಕ್ಟರ್ ಅಲಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

- Advertisement -

Related news

error: Content is protected !!