Monday, April 29, 2024
spot_imgspot_img
spot_imgspot_img

ಉಡುಪಿ : ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಭಾರ ವ್ಯವಸ್ಥಾಪಕಿ ಆತ್ಮಹತ್ಯೆಗೆ ಶರಣು..!!

- Advertisement -G L Acharya panikkar
- Advertisement -

ಉಡುಪಿ: ಉಡುಪಿ ಜಿಲ್ಲೆಯ ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಭಾರ ವ್ಯವಸ್ಥಾಪಕಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಆಶಾ ಎಸ್ (52) ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದಾರೆ.

ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಭಾರ ವ್ಯವಸ್ಥಾಪಕಿಯಾಗಿದ್ದ ಆಶಾ ಅವರು ಬುಧವಾರ ಬೆಳಗ್ಗೆ ಕರ್ತವ್ಯಕ್ಕೆ ಹಾಜರಾಗಿದ್ದರು ಬಳಿಕ ಅಪರಾಹ್ನ ಕಚೇರಿಯಿಂದ ಯಾರಿಗೂ ತಿಳಿಸದೆ ನೇರವಾಗಿ ಮನೆಗೆ ಹೋಗಿ, ಮಹಡಿಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬ್ಯಾಂಕ್ ಮೂಲಗಳ ಪ್ರಕಾರ ಆಶಾ ಅವರು ತಮ್ಮ ಚಿನ್ನವನ್ನು ಪತಿಯ ಹೆಸರಿನಲ್ಲಿ ಸಂಘದಲ್ಲಿ ಅಡವಿಟ್ಟು ಸಾಲ ಪಡೆದಿದ್ದರು. ಚಿನ್ನವನ್ನು ಲಾಕರ್‌ನಲ್ಲಿ ಇಡುವ ಜವಾಬ್ದಾರಿಯನ್ನು ಅವರೇ ನಿಭಾಯಿಸುತ್ತಿದ್ದರು. ಬುಧವಾರ ಅಡಿಟ್‌ ನಡೆಯುವಾಗ ಅವರು ಅಡವಿಟ್ಟ ಚಿನ್ನ ಲಾಕರ್‌ನಲ್ಲಿ ಇಲ್ಲದಿರುವುದನ್ನು ಆಶಾ ಅವರಲ್ಲಿ ವಿಚಾರಿಸಲಾಗಿದೆ. ಚಿನ್ನ ಇಲ್ಲದಿರುವ ವಿಚಾರ ಹೊರಗಡೆಗೆ ಬಂದು ಅವಮಾನವಾಗುತ್ತದೆ ಎಂದು ಹೆದರಿ, ಕಚೇರಿಯಲ್ಲಿ ಯಾರಿಗೂ ಹೇಳದೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ ಎಂದಿದ್ದಾರೆ.

ಆಶಾ ಅವರು ಕಚೇರಿಯಲ್ಲಿ ಇಲ್ಲದಿರುವುದು ಗೊತ್ತಾದ ಬಳಿಕ ಹುಡುಕಾಟ ನಡೆಸಲಾಗಿದ್ದು, ಸಿಸಿ ಕ್ಯಾಮರಾ ಪರಿಶೀಲಿಸಿದಾಗ , ಮನೆಯ ಕಡೆಗೆ ಸ್ಕೂಟಿ ತೆಗೆದುಕೊಂಡು ಹೋಗುತ್ತಿರುವುದು ಕಂಡುಬಂದಿದ್ದು, ಕೂಡಲೇ ಬ್ಯಾಂಕ್ ಸಿಬ್ಬಂದಿಗಳು ಆಶಾ ಅವರ ಮನೆಗೆ ಬಂದು ನೋಡಿದಾಗ ಅವರು ನೇಣುಬಿಗಿದುಕೊಂಡಿದ್ದರು. ಸ್ಥಳೀಯರು ಬಂದು ಬಾಗಿಲು ಒಡೆದು ನೇಣಿನಿಂದ ಆಶಾ ಅವರನ್ನು ಕೆಳಗೆ ಇಳಿಸಿ, ಕೂಡಲೇ ಸಿದ್ದಾಪುರ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿಂದ ಮಣಿಪಾಲದ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದರು.

ಆಶಾ ಅವರಿಗೆ ಇಬ್ಬರು ಮಕ್ಕಳಿದ್ದು, ಪುತ್ರ ಮದುವೆಯಾಗಿ ಯುಎಸ್‌ಎಯಲ್ಲಿ ಉದ್ಯೋಗದಲ್ಲಿದ್ದಾರೆ. ಪುತ್ರಿ ಉನ್ನತ ವ್ಯಾಸಂಗ ಮಾಡುತ್ತಿದ್ದು,ಆತ್ಮಹತ್ಯೆಯ ಕೆಲವು ಕ್ಷಣಗಳ ಮೊದಲು ಮಗಳಿಗೆ ಸಾರೀ ಮಗಳೆ ಎಂದು ಮೆಸೇಜ್‌ ಮಾಡಿದ್ದರು ಎಂದು ತಿಳಿದುಬಂದಿದೆ. ಮನೆಗೆ ಬಂದಿದ್ದ ಆಶಾ ಮೊದಲು ತಾಯಿಯ ಹತ್ತಿರ ನೀನು ಊಟ ಮಾಡು. ನನಗೆ ಸೊಸೈಟಿಯ ಕೆಲಸ ಇದೆ. ನಾನು ಮಹಡಿಯ ಮೇಲಿನ ರೂಂನಲ್ಲಿ ಇರುತ್ತೇನೆ. ನನ್ನನ್ನು ಕರೆಯಬೇಡ ಎಂದು ಹೇಳಿದ್ದರು ಎಂದು ತಾಯಿ ಹೇಳಿಕೆ ನೀಡಿದ್ದಾರೆ

- Advertisement -

Related news

error: Content is protected !!