Saturday, April 27, 2024
spot_imgspot_img
spot_imgspot_img

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಜೀಪ್ ಕಂದಕಕ್ಕೆ ಬಿದ್ದು – 9 ಮಂದಿ ಸಾವು..!

- Advertisement -G L Acharya panikkar
- Advertisement -

ಚಹಾ ತೋಟದ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಜೀಪ್ ಕಂದಕಕ್ಕೆ ಉರುಳಿ ಬಿದ್ದು 9 ಮಂದಿ ಮೃತಪಟ್ಟಿರುವ ದಾರುಣ ಘಟನೆ ಕೇರಳದ ವಯನಾಡ್ ಜಿಲ್ಲೆಯ ಮಾನಂತವಾಡಿಯಲ್ಲಿ ನಡೆದಿದೆ.

ದೀಪು ಟೀ ಟ್ರೇಡಿಂಗ್ ಕಂಪನಿಗೆ ಸೇರಿದ 12 ಕಾರ್ಮಿಕರು ಚಹಾ ತೋಟದ ಕೆಲಸ ಮುಗಿಸಿ ಮನೆಗೆ ಪ್ರಯಾಣಿಸುತ್ತಿದ್ದಾಗ ಜೀಪ್ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ 30 ಮೀಟರ್ ಆಳದ ಕಂದಕಕ್ಕೆ ಬಿದ್ದಿದೆ. ಆರು ಮಹಿಳೆಯರು ಸೇರಿದಂತೆ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ವಯನಾಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.
ಜೀಪ್ ಅಪಘಾತದಲ್ಲಿ ಒಂಬತ್ತು ಮಂದಿ ಸಾವಿಗೀಡಾಗಿದ್ದು, ಚಾಲಕ ಸೇರಿದಂತೆ ಗಾಯಗೊಂಡ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವಯನಾಡ್ ಕಲೆಕ್ಟರ್ ರೇಣು ರಾಜ್ ಅವರು ತಿಳಿಸಿದ್ದಾರೆ.

- Advertisement -

Related news

error: Content is protected !!