Sunday, June 29, 2025
spot_imgspot_img
spot_imgspot_img

ಮನೆ ಬೀಗ ಮುರಿದು ನಗ-ನಗದು ಕಳವು; ರಾಯರ ದರ್ಶನ ಪಡೆದು ಮನೆಗೆ ವಾಪಸ್ಸಾದವರಿಗೆ ಆಘಾತ

- Advertisement -
- Advertisement -

ಮನೆಮಂದಿ ಮಂತ್ರಾಲಯದ ರಾಯರ ದರ್ಶನಕ್ಕೆ ಹೋಗಿದ್ದ ಸಂದರ್ಭದಲ್ಲಿ ಮನೆ ಬೀಗ ಮುರಿದು ಕಳ್ಳರು ನಗ-ನಗದು ದೋಚಿಕೊಂಡು ಪರಾರಿ ಆಗಿರುವ ಘಟನೆ ಚಾಮರಾಜನಗರದ ಚನ್ನೀಪುರಮೋಳೆ ಬಡಾವಣೆಯಲ್ಲಿ ನಡೆದಿದೆ.

ಬಡಾವಣೆಯ ರಾಘವೇಂದ್ರ ಎಂಬುವವರ ಮನೆಯಲ್ಲಿ, ಎಲ್ಲರೂ ಮಂತ್ರಾಲಯದ ರಾಯರ ದರ್ಶನಕ್ಕೆ ಹೋಗಿದ್ದರು. ಮಂತ್ರಾಲಯದಿಂದ ಬರುವಷ್ಟರಲ್ಲಿ ಮನೆ ಬೀಗ ಒಡೆದು ಕಳ್ಳತನ ಮಾಡಿದ್ದಾರೆ. ಬರೋಬ್ಬರಿ 14 ಲಕ್ಷ ರೂಪಾಯಿ ಮೌಲ್ಯದ 200 ಗ್ರಾಂ ಚಿನ್ನಾಭರಣದ ಜೊತೆಗೆ 20 ಸಾವಿರ ರೂಪಾಯಿ ನಗದು ದೋಚಿದ್ದಾರೆ. ಈ ಕುರಿತು ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮನೆಯಲ್ಲಿದ್ದ ಸಿಸಿಟಿವಿ ಪರಿಶೀಲನೆ ನಡೆಸಿ ಆರೋಪಿಗಳಿಗಾಗಿ ಪೊಲೀಸರು ಶೋಧಕಾರ್ಯ ಆರಂಭಿಸಿದ್ದಾರೆ.

- Advertisement -

Related news

error: Content is protected !!