Thursday, May 2, 2024
spot_imgspot_img
spot_imgspot_img

ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು..!

- Advertisement -G L Acharya panikkar
- Advertisement -

ಬಸ್‌ ಕಂಡಕ್ಟರೋರ್ವ ವಿಷ ಕುಡಿದು ಸಾಲದೆಂದು ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗಿನಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ವಿರಾಜಪೇಟೆಯ ಆರ್ಜಿ ಗ್ರಾಮದ ನಿವಾಸಿ ಮಡಿಕೇರಿಯ ಲಾಡ್ಜ್‌ನಲ್ಲಿ ಮೊಣ್ಣಪ್ಪ (28) ಎಂದು ಗುರುತಿಸಲಾಗಿದೆ.

ವಿರಾಜಪೇಟೆಯ ಆರ್ಜಿ ಗ್ರಾಮದ ನಿವಾಸಿ ಮೊಣ್ಣಪ್ಪ, ಮಡಿಕೇರಿಯಲ್ಲಿ ಖಾಸಗಿ ಬಸ್ ನಿರ್ವಾಹಕನಾಗಿ ಕೆಲಸ ಮಾಡುತ್ತಿದ್ದ. ಸದ್ಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ರೂಮಿನ ಬಾಗಿಲು ತೆರೆಯದೇ ಇದ್ದಾಗ ಅನುಮಾನಗೊಂಡ ಲಾಡ್ಜ್‌ ಸಿಬ್ಬಂದಿ ಮತ್ತೊಂದು ಕೀ ಬಳಸಿ ತೆರೆದುನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಪೊಲೀಸರಿಗೆ ಈ ವಿಷಯವನ್ನು ಮುಟ್ಟಿಸಿದ್ದಾರೆ. ಘಟನಾ ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

- Advertisement -

Related news

error: Content is protected !!