Friday, June 27, 2025
spot_imgspot_img
spot_imgspot_img

ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು..!

- Advertisement -
- Advertisement -

ಹಾಪ್ ಕಾಮ್ಸ್ ಉದ್ಯೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ತಾಲೂಕಿನ ಬಸವನತ್ತ ಗ್ರಾಮದ ಬಳಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಬಸವನು ಗ್ರಾಮದ ಶ್ರೀನಿವಾಸಗೌಡ (59) ಎಂದು ಗುರುತಿಸಲಾಗಿದೆ.

ಶ್ರೀನಿವಾಸಗೌಡ ಕಳೆದ 30 ವರ್ಷಗಳಿಂದ ಕೋಲಾರ ನಗರದ ಟೇಕಲ್ ರಸ್ತೆಯ ಹಾಪ್ ಕಾಮ್ಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು ಹದಿನೈದು ಸಾವಿರ ಸಂಬಳ ನೀಡುತ್ತಿದ್ದರು. ಆ ಸಂಬಳ ಜೀವನ ನಿರ್ವಹಣೆಗೆ ಸಾಕಾಗುತ್ತಿರಲಿಲ್ಲ ಎಂಬ ಬೇಸರ ಇತ್ತು. ಅದರ ಜೊತೆಗೆ ಇತ್ತೀಚೆಗೆ ಮೇಲಾಧಿಕಾರಿಗಳು ಟಾರ್ಗೆಟ್ ಕೊಟ್ಟು ವ್ಯಾಪಾರ ಮಾಡುವಂತೆ ಒತ್ತಾಯ ಮಾಡುತ್ತಿದ್ದು, ಟಾರ್ಗೆಟ್ ಮಾಡದೆ ಹೋದಾಗ ಸಂಬಳದಲ್ಲಿ ಹಣ ಕಟ್ ಮಾಡುತ್ತಿದ್ದರು.

ಇದರಿಂದ ಹಣದ ಸಮಸ್ಯೆಯಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ದೂರು ನೀಡಲಾಗಿದೆ.ಇತ್ತೀಚೆಗೆ ತೋಟಗಾರಿಕೆ ಹಾಗೂ ಹಾಪ್ ಕಾಮ್ಸ್ ಅಧಿಕಾರಿಗಳು ತಿಂಗಳಿಗೆ ಒಂದು ಲಕ್ಷ ಟಾರ್ಗೆಟ್ ನಿಗಧಿ ಮಾಡಿದ್ದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಕೋಲಾರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರನ ದಾಖಲಾಗಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!