- Advertisement -
- Advertisement -
ಮೀನು ಅಂಗಡಿ ಇಟ್ಟುಕೊಂಡು ವ್ಯಾಪಾರ ಮಾಡುತಿದ್ದ ವ್ಯಕ್ತಿಯೊಬ್ಬರು ಅಂಗಡಿಯೊಳಗೆ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀಜಾಡಿ ಗ್ರಾಮದಲ್ಲಿ ನಡೆದಿದೆ.
ಮೃತ ಮೀನು ವ್ಯಾಪಾರಿ ಉದಯ (47) ಎಂದು ಗುರುತಿಸಲಾಗಿದೆ.
ಮನೆಯಿಂದ ಬೆಳಗ್ಗೆ ಮೀನು ಅಂಗಡಿಗೆ ಹೋಗುವುದಾಗಿ ಪತ್ನಿಗೆ ತಿಳಿಸಿ ಹೋಗಿದ್ದು, ಕೆಲಸದ ವ್ಯಕ್ತಿ ಅಂಗಡಿ ಬಳಿ ಬಂದು ನೋಡಿದಾಗ ಉದಯ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವುದು ತಿಳಿದು ಬಂದಿದೆ. ಸಾಲಬಾಧೆಯಿಂದ ಜೀವನದಲ್ಲಿ ಜುಗುಪ್ಪೆಗೊಂಡು ಈ ಕೃತ್ಯ ಎಸಗಿರಬಹುದಾಗಿದೆ ಎಂದು ಅವರ ಸಹೋದರ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಗ್ರಾಮದ ನಾಗೇಶ್ ಅವರು ಕುಂದಾಪುರ ಠಾಣೆಗೆ ದೂರು ನೀಡಿದ್ದಾರೆ. ಈ ಘಟನೆಯ ಬಗ್ಗೆ ದಾಪುರ ಪೊಲೀಸ್ ಠಾಣೆಯಲಿ ಪ್ರಕರಣ ದಾಖಲಾಗಿದೆ.
- Advertisement -