Monday, May 6, 2024
spot_imgspot_img
spot_imgspot_img

ಧರ್ಮಸ್ಥಳ: ರೈಸ್‌ ಮಿಲ್‌ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಅನುಮಾನಾಸ್ಪದ ಸಾವು; ತಿಂಗಳ ಬಳಿಕ ಪ್ರಕರಣ ಬೆಳಕಿಗೆ

- Advertisement -G L Acharya panikkar
- Advertisement -

ಧರ್ಮಸ್ಥಳ: ರೈಸ್‌ ಮಿಲ್‌ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಘಟನೆ ಧರ್ಮಸ್ಥಳ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಘಟನೆ ನಡೆದು ತಿಂಗಳುಗಳು ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.

ಧರ್ಮಸ್ಥಳ ನಿವಾಸಿ ಕೃಷ್ಣಪ್ಪ ಸಫಲ್ಯ (60) ಸಾವನ್ನಪ್ಪಿದ್ದ ವ್ಯಕ್ತಿ.

ಕೃಷ್ಣ ಗಾಣಿಗರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಂಬಂಧಿಸಿದ ಅಕ್ಕಿ ಮಿಲ್‌ನಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಸೆ. 03ರಂದು ಎಂದಿನಂತೆ ಕೆಲಸಕ್ಕೆ ತೆರಳಿದ್ದು, ಸಂಜೆ ವೇಳೆಗೆ ಉಗ್ರಾಣದ ಮ್ಯಾನೇಜರ್‌ ಮನೆಗೆ ಬಂದು ಕೃಷ್ಣ ಗಾಣಿಗರವರು ರೈಸ್ ಮಿಲ್ ನ ಹಿಂಬದಿಯಲ್ಲಿ ನೀರು ತುಂಬಿಸಿಟ್ಟಿರುವ ದೊಡ್ಡ ಗಾತ್ರದ ಸ್ಟೀಲ್ ಪಾತ್ರೆಯ ಒಳಗೆ ಮೃತಪಟ್ಟಿರುವ ರೀತಿಯಲ್ಲಿ ಇದ್ದಾರೆ ಎಂದು ತಿಳಿಸಿದ್ದಾರೆ.

ಸ್ಥಳಕ್ಕೆ ತೆರಳಿ ನೋಡಿದಾಗ ತುಂಬಿಸಿಟ್ಟ ದೊಡ್ಡ ಸ್ಟಿಲ್‌ ಪಾತ್ರೆಯ ಒಳಗೆ ನೀರಿನಲ್ಲಿ ಕವುಚಿ ತೇಲಿಕೊಂಡು ಇರುವಂತೆ ಮೃತದೇಹ ಕಂಡುಬಂದಿದೆ. ಸ್ಟೀಲ್ ಪಾತ್ರೆಯ ಮೇಲ್ಭಾಗವನ್ನು ಅರ್ಧದಷ್ಟು ಸಿಮೆಂಟ್ ಶೀಟ್‌ನಿಂದ ಮುಚ್ಚಿದ್ದು, ನೀರಿನಲ್ಲಿ ಮುಳುಗಿ ಉಸಿರುಗಟ್ಟಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಸಂಶಯ ವ್ಯಕ್ತಪಡಿಸಿ ಮೃತರ ಮಗ ವಿನಯ್‌ ಕುಮಾರ್‌ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ಕೃಷ್ಣ ಗಾಣಿಗರವರು ಮುಳುಗಿ ಮೃತಪಟ್ಟ ಸ್ಟಿಲ್‌ ಪಾತ್ರೆಯು ಹೆಚ್ಚೆಂದರೆ ಸೊಂಟದವರೆಗೆ ಬರಬಹುದು. ಇದರಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವೇ ಎಂದು ಸಾರ್ವಜನಿಕರು ಅನುಮಾನ ವ್ಯಕ್ತಪಡಿಸಿದ್ದಾರೆ.

- Advertisement -

Related news

error: Content is protected !!