Wednesday, May 8, 2024
spot_imgspot_img
spot_imgspot_img

ಸೊಂಟದಲ್ಲಿ ಗನ್ ಇಟ್ಟುಕೊಂಡು ಸಿಎಂಗೆ ಹಾರ ಹಾಕಿದ ವ್ಯಕ್ತಿ

- Advertisement -G L Acharya panikkar
- Advertisement -

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಭೈರಸಂದ್ರದಲ್ಲಿ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ವೇಳೆ ವ್ಯಕ್ತಿಯೊಬ್ಬ ಸೊಂಟದಲ್ಲಿ ಗನ್ ಇಟ್ಟುಕೊಂಡು ಬಂದು ಹಾರ ಹಾಕಿದ ಘಟನೆ ನಡೆದಿದೆ.

ಗನ್ ಇಟ್ಟುಕೊಂಡು ಸಿಎಂಗೆ ಹಾರ ಹಾಕಿದ ವ್ಯಕ್ತಿಯನ್ನು ರಿಯಾಜ್ ಎಂದು ಗುರುತಿಸಲಾಗಿದೆ.

ಬೆಂಗಳೂರು ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಹಾಗೂ ಬೆಂಗಳೂರು ಕೇಂದ್ರ ಕ್ಷೇತ್ರದ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಪರ ಸಿಎಂ ಮತಯಾಚನೆ ಮಾಡಿತ್ತಿದ್ದರು. ಈ ವೇಳೆ ರಿಯಾಜ್ ಎಂಬ ವ್ಯಕ್ತಿಯು ತನ್ನ ಸೊಂಟಕ್ಕೆ ಗನ್ ಸಿಕ್ಕಿಸಿಕೊಂಡು, ಸಿಎಂ ಇದ್ದ ವಾಹನ ಏರಿದ್ದಾನೆ. ಬಳಿಕ ಸಿಎಂ ಸಿದ್ದರಾಮಯ್ಯ ಅವರಿಗೆ ಹಾರ ಹಾಕಿದ್ದಾನೆ.

ರಿಯಾಜ್ ನು ಸಿದ್ದಾಪುರದ ಕಾಂಗ್ರೆಸ್ ಕಾರ್ಯಕರ್ತನಾಗಿದ್ದು, 5 ವರ್ಷಗಳ ಹಿಂದೆ ರಿಯಾಜ್ ಮೇಲೆ ಕೊಲೆ ಯತ್ನವಾದ ಬಳಿಕ ಗನ್ ಪರವಾನಿಗೆ ಪಡೆದುಕೊಂಡಿದ್ದ ಎಂದು ತಿಳಿದು ಬಂದಿದೆ.ಬೆಂಗಳೂರು ಆತನ ಬಳಿ ಗನ್ ಇರುವುದನ್ನು ಪೊಲೀಸರು ಗಮನಿಸಿಲ್ಲ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮುಖಂಡ ಆರ್.ವಿ ದೇವರಾಜ್, ರಿಯಾಜ್ ಕಾಂಗ್ರೆಸ್‍ನ ಕಾರ್ಯಕರ್ತ, ನಾಲ್ಕೈದು ವರ್ಷಗಳ ಹಿಂದೆ ಅವನ ಮೇಲೆ ಅಟ್ಯಾಕ್ ಆಗಿತ್ತು. ಇದರಿಂದ ಗನ್ ಲೈಸೆನ್ಸ್ ಪಡೆದುಕೊಂಡು, ಇಟ್ಟುಕೊಂಡಿದ್ದಾನೆ ಅನಿಸುತ್ತದೆ. ಅವನೇನು ರೌಡಿ ಅಲ್ಲ ಎಂದಿದ್ದಾರೆ.

ಸಿಎಂ ಬಳಿ ಗನ್ ತೆಗೆದುಕೊಂಡ ಹೋದ ವ್ಯಕ್ತಿ ಮೇಲೆ ಅನುಮಾನ ಮೂಡಿದ್ದು, ಚುನಾವಣಾ ಸಂದರ್ಭದಲ್ಲಿ ಗನ್ ಇಟ್ಟುಕೊಳ್ಳಲು ಅವಕಾಶ ಇಲ್ಲ. ತೀರಾ ಅವಶ್ಯಕತೆ ಇದ್ದರೆ ಮಾತ್ರ ಈ ಸಂದರ್ಭದಲ್ಲಿ ಗನ್ ಇಟ್ಟುಕೊಳ್ಳಲು ಅವಕಾಶವಿದೆ. ಕಮಿಷನರ್ ಅವರಿಂದ ಅನುಮತಿ ಸಿಕ್ಕರೆ ಮಾತ್ರ ಗನ್ ಇಟ್ಟುಕೊಳ್ಳಬಹುದು. ಬ್ಯಾಂಕ್ ಸಿಬ್ಬಂದಿ, ವಿಜ್ಞಾನಿಗಳು ತೀರಾ ಅವಶ್ಯಕತೆ ಇದ್ದವರಿಗೆ ಮಾತ್ರ ಗನ್ ಇಟ್ಟುಕೊಳ್ಳಲು ಅವಕಾಶವಿದೆ.

ಇದು ಪೊಲೀಸ್ ಭದ್ರತಾ ವೈಫಲ್ಯನಾ? ಲೈಸೆನ್ಸ್ ಹೊಂದಿದ ವ್ಯಕ್ತಿ ಆದ್ರೂ, ಸಿಎಂ ಬಳಿ ಗನ್ ಇಟ್ಟುಕೊಂಡು ಹೋಗಬಹುದಾ? ಗನ್ ತಂದಿದ್ದ ವ್ಯಕ್ತಿಯನ್ನ ಪೊಲೀಸರು ಯಾಕೆ ಪರಿಶೀಲನೆ ಮಾಡಲಿಲ್ಲ ಎಂದು ಸಾರ್ವಜನಿಕ ವಲಯದಲ್ಲಿ ಚರ್ಚೆ ಶುರುವಾಗಿದೆ.

- Advertisement -

Related news

error: Content is protected !!