Sunday, June 29, 2025
spot_imgspot_img
spot_imgspot_img

ಜಗಳ ಬಗೆಹರಿಸಲು ಬಂದ ಪೊಲೀಸರ 112 ವಾಹನವನ್ನೇ ಚಲಾಯಿಸಿಕೊಂಡು ಪರಾರಿಯಾದ ಕಿಡಿಗೇಡಿ

- Advertisement -
- Advertisement -

ಜಗಳ ಬಗೆಹರಿಸಲು ಬಂದ ಪೊಲೀಸರ 112 ಸಮೇತ ಪರಾರಿಯಾಗಲು ಯತ್ನಿಸಿದ ಕಿಡಿಗೇಡಿಯನ್ನು ಸಿನಿಮೀಯ ರೀತಿಯಲ್ಲಿ ಪೊಲೀಸರು ಹಿಡಿದ ಘಟನೆ ತುಮಕೂರು ಗುಬ್ಬಿ ತಾಲೂಕಿನ ನಾರಾನಹಳ್ಳಿಯಲ್ಲಿ ನಡೆದಿದೆ.

ಮುನಿಯ ಎಂಬಾತ ತನ್ನ ಅಣ್ಣನ ಜೊತೆ ಜಗಳ ಮಾಡಿದ್ದಾನೆ. ಆಗ ಮುನಿಯನ ಸಹೋದರ 112 ಸಂಖ್ಯೆಗೆ ಕರೆ ಮಾಡಿದ್ದು, ಅದರಂತೆ ಪೋಲಿಸರ 112 ವಾಹನ ಘಟನಾ ಸ್ಥಳಕ್ಕೆ ಬಂದಿದೆ. ಈ ವೇಳೆ ಮುನಿಯ 112 ವಾಹನದ ಹಿಂಬದಿಗೆ ಕಲ್ಲಿನಿಂದ ಹೊಡೆದಿದ್ದು, ಅದನ್ನು ಚಾಲಕ ಏನಾಯ್ತು ಎಂದು ವಾಹನ ಹಿಂಬದಿಗೆ ನೋಡಲು ಹೋಗಿದ್ದಾನೆ. ಆಗ ಮುನಿಯ ಪೊಲೀಸರ 122​ ವಾಹನ ಚಲಾಯಿಸಿಕೊಂಡು ಪರಾರಿಯಾಗಿದ್ದಾನೆ.

ಬಳಿಕ ಪೊಲೀಸರು ಸತತ 3 ಗಂಟೆಗಳ ಕಾಲ ವಾಹನಕ್ಕಾಗಿ ಕಾರ್ಯಚರಣೆ ನಡೆಸಿದ್ದಾರೆ. ಕೊನೆಗೆ ತುಮಕೂರು ತಾಲೂಕಿನ ಹೆಬ್ಬೂರು ಬಳಿ ವಾಹನ ಪತ್ತೆಯಾಗಿದ್ದು, ಸದ್ಯ ಆರೋಪಿ ಮುನಿಯನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

- Advertisement -

Related news

error: Content is protected !!