Saturday, June 28, 2025
spot_imgspot_img
spot_imgspot_img

ಎಟಿಎಂಗೆ ಹಣ ಹಾಕಲು ಬಂದ ಸಿಬ್ಬಂದಿ ಮೇಲೆ ದುರ್ಷ್ಕಮಿಗಳಿಂದ ಗುಂಡಿನ ದಾಳಿ; ಇಬ್ಬರು ಮೃತ್ಯು

- Advertisement -
- Advertisement -

ಬೀದರ್: ಬೀದರ್‌ನ ಶಿವಾಜಿ ಚೌಕ್​ನಲ್ಲಿ ಗುರುವಾರ ಎಟಿಎಂಗೆ ಹಣ ತುಂಬಿಸುವ ವೇಳೆ ಹಾಡಹಗಲೇ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಎಟಿಎಂಗೆ ಹಣ ತುಂಬುವ ವಾಹನದ ಹಿಂಭಾಗ ವ್ಯಕ್ತಿಯೊಬ್ಬನ ಶವ ಬಿದ್ದಿದ್ದರೆ, ಕ್ಷಣಮಾತ್ರದಲ್ಲೇ ಸಿನಿಮೀಯ ರೀತಿಯಲ್ಲಿ ಇಬ್ಬರು ದುರ್ಷರ್ಮಿಗಳು ಹಣ ಎಗರಿಸಿ ಪರಾರಿಯಾಗಿದ್ದಾರೆ. ಎಟಿಎಂಗಳಿಗೆ ಹಣ ತುಂಬುವ ವಾಹನವೊಂದು ಅಲ್ಲಿಗೆ ಬಂದಿದೆ. ಹಾಡಹಗಲೇ, ನೋಡ ನೋಡುತ್ತಿದ್ದಂತೆಯೇ ಏಕಾಏಕಿ ದುರ್ಷರ್ಮಿಗಳು ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ವಾಹನದಲ್ಲಿದ್ದ ವ್ಯಕ್ತಿ ಗುಂಡಿನ ದಾಳಿಗೆ ಬಲಿಯಾಗಿದ್ದಾನೆ.

ದುಷ್ಕರ್ಮಿಗಳ ದಾಳಿಗೆ ಬಲಿಯಾದ ವ್ಯಕ್ತಿಯನ್ನು ಗಿರಿ ವೆಂಕಟೇಶ್ (ಎಟಿಎಂಗಳಿಗೆ ಹಣ ಹಾಕುವ ಸಿಎಂಎಸ್ ಏಜೆನ್ಸಿಯ ಸಿಬ್ಬಂದಿ) ಎಂದು ಗುರುತಿಸಲಾಗಿದೆ. ಎಂದಿನಂತೆ ಇವತ್ತು ಕೂಡ ಎಟಿಎಂಗಳಿಗೆ ಹಣ ಹಾಕಲು ತೆರಳುತ್ತಿದ್ದಾಗ ಬೈಕ್‌ನಲ್ಲಿ ಬಂದ ದುರ್ಷರ್ಮಿಗಳು ಐದು ಬಾರಿ ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಗಿರಿ ವೆಂಕಟೇಶ್‌ಗೆ ಗುಂಡು ತಗುಲಿದೆ. ಸ್ಥಳದಲ್ಲೇ ಗಿರಿ ಮೃತಪಟ್ಟಿದ್ದಾರೆ.

ವಾಹನದಲ್ಲಿದ್ದವರಿಗೆ ಖಾರದ ಪುಡಿ ಎರಚಿದ ಇಬ್ಬರು ದುರ್ಷರ್ಮಿಗಳು, ನಂತರ ಗುಂಡಿನ ದಾಳಿ ನಡೆಸಿದ್ದಾರೆ. ಗಿರಿ ವೆಂಕಟೇಶ್ ಸ್ಥಳದಲ್ಲೇ ಸಾವನ್ನಪ್ಪುತ್ತಿದ್ದಂತೆಯೇ ವಾಹನದಲ್ಲಿದ್ದ ಹಣದ ಬಾಕ್ಸ್ ಅನ್ನು ಬೈಕ್‌ನಲ್ಲಿ ಇಟ್ಟುಕೊಂಡು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.ಘಟನೆಯಲ್ಲಿ ಗಾಯಗೊಂಡಿದ್ದ ಶಿವಕುಮಾರ್ (26) ಅವರನ್ನು ಚಿಕಿತ್ಸೆಗಾಗಿ ಬೀದರ್​​ನ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಅವರು ಸಹ ಮೃತಪಟ್ಟಿದ್ದಾರೆ.

ಎಟಿಎಂ ವಾಹನದಲ್ಲಿ ಒಟ್ಟು 87 ರೂ. ಲಕ್ಷ ಹಣ ಇದ್ದ ಬಗ್ಗೆ ಮಾಹಿತಿ ದೊರೆತಿದೆ. 5 ಲಕ್ಷ ರೂ. ನಗದು ಸ್ಥಳದಲ್ಲಿಯೇ ಬಿಟ್ಟು ಹೋಗಿದ್ದಾರೆ.

- Advertisement -

Related news

error: Content is protected !!