Tuesday, May 7, 2024
spot_imgspot_img
spot_imgspot_img

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಕೊಲೆಗೈದ ದುಷ್ಕರ್ಮಿಗಳು..!

- Advertisement -G L Acharya panikkar
- Advertisement -

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಓಕಳಿ ಗ್ರಾಮ ರಸ್ತೆಯಲ್ಲಿ ನಡೆದಿದೆ.

ಕೊಲೆಯಾದ ವ್ಯಕ್ತಿ ಅಂಬಾರಾಯ ಪಟ್ಟೇದಾರ್ (28) ಎಂದು ಗುರುತಿಸಲಾಗಿದೆ.

ಮೃತನು ಕಲಬುರಗಿಯ ಜೇವರ್ಗಿ ತಾಲೂಕಿನ ಕೂಡಿ ದರ್ಗಾ ಗ್ರಾಮದ ನಿವಾಸಿ ,ಆದರೆ ಕಾರಣಾಂತರದಿಂದ ಪತ್ನಿಯ ತವರೂರು ಬೆಳಕೋಟಾ ಗ್ರಾಮದಲ್ಲಿ ನೆಲೆಸಿದ್ದನು.ಈತ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದನು. ಈ ಸಂಬಂಧ ಸಂಬಂಧಿಕರು ಹುಡುಕಾಟ ನಡೆಸಿದ್ದರು. ಆದರೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಬಳಿಕ ಶವವನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಇಂದು ಮೃತದೇಹ ಪತ್ತೆಯಾಗಿದ್ದು ಹತ್ಯೆಯ ಹಿಂದೆ ಹಲವಾರು ಅನುಮಾನ ವ್ಯಕ್ತವಾಗಿವೆ. ಈ ಸಂಬಂಧ ಕಮಲಾಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

- Advertisement -

Related news

error: Content is protected !!