Monday, May 6, 2024
spot_imgspot_img
spot_imgspot_img

ಒಂಟಿ ಮಹಿಳೆ ಬಾಯಿಗೆ ಬಟ್ಟೆ ತುರುಕಿ ಉಸಿರುಗಟ್ಟಿಸಿ ಕೊಲೆ ಮಾಡಿದ ದುಷ್ಕರ್ಮಿಗಳು

- Advertisement -G L Acharya panikkar
- Advertisement -

ಮಹಿಳೆ ಬಾಯಿಗೆ ಬಟ್ಟೆ ತುರುಕಿ ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ವಿಜಯನಗರದಲ್ಲಿ ನಡೆದಿದೆ.

ಕಮಲಮ್ಮ (50) ದುಷ್ಕರ್ಮಿಗಳಿಂದ ಕೊಲೆಯಾದ ಮಹಿಳೆ. ಹೊಸದುರ್ಗದಲ್ಲಿ ಪಿಡಬ್ಲ್ಯೂಡಿ ಇಂಜಿನಿಯರ್ ಆಗಿರುವ ಮಲ್ಲಿಕಾರ್ಜುನ್ ಎಂಬುವವರ ಪತ್ನಿಯಾಗಿರುವ ಕಮಲಮ್ಮ.

ಮನೆಯಲ್ಲಿ ಒಬ್ಬರೇ ಇರುವುದು ತಿಳಿದು ಮನೆಗೆ ನುಗ್ಗಿದ ದುಷ್ಕರ್ಮಿಗಳನ್ನು ಕಮಲಮ್ಮ ಪ್ರಶ್ನಿಸಿದ್ದಾಳೆ. ದುಷ್ಕರ್ಮಿಗಳಿಗೆ ಪ್ರತಿರೋಧ ಒಡ್ಡಿದರೂ ಬಿಡದ ದುಷ್ಕರ್ಮಿಗಳು ಬಾಯಿಗೆ ಬಟ್ಟೆ ತುರುಕಿ ಉಸಿರುಗಟ್ಟಿಸಿದ್ದಾರೆ. ಉಸಿರುಗಟ್ಟಿಸಿ ಕೊಂದ ಬಳಿಕ ಮನೆಯಲ್ಲಿದ್ದ ನಗದು ಹಣವನ್ನು ತೆಗೆದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ. ಮಲ್ಲಿಕಾರ್ಜುನ್​ರವರು ಗೋವಾಕ್ಕೆ ತೆರಳಿದ್ದ ವೇಳೆ ಘಟನೆ ನಡೆದಿದೆ.

ನಿನ್ನೆ ಪತಿ ಮಲ್ಲಿಕಾರ್ಜುನ್ ಕಮಲಮ್ಮಳ ಮೊಬೈಲ್‌ಗೆ ಎಷ್ಟೇ ಕರೆ ಮಾಡಿದ್ದು, ಕರೆ ಸ್ವೀಕರಿಸದ ಹಿನ್ನೆಲೆ ಪತಿ ಪಕ್ಕದ ಮನೆಯವರಿಗೆ ಕರೆಮಾಡಿ ಮನೆಗೆ ಹೋಗಿ ನೋಡಲು ತಿಳಿಸಿದ್ದಾರೆ. ಅದರಂತೆ ಪಕ್ಕದ ಮನೆಯವರು ಮನೆಗೆ ಬಂದು ನೋಡಿದಾಗ ಕಮಲಮ್ಮ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ. ಪಕ್ಕದ ಮನೆಯವರಿಂದ ವಿಷಯ ತಿಳಿದ ಬಳಿಕ ಪತಿ ಮಲ್ಲಿಕಾರ್ಜುನ್ ಮನೆಯತ್ತ ದೌಡಾಯಿಸಿದ್ದಾರೆ.

ಘಟನೆ ಬಗ್ಗೆ ಮಾಹಿತಿ ಪಡೆದ ತುಂಗಾ ನಗರ ಪೊಲೀಸ್ ಠಾಣೆಯ ಪಿಐ ಮಂಜುನಾಥ್ ನೇತೃತ್ವದ ತಂಡ ಸ್ಥಳಕ್ಕೆ ಭೇಟಿ ಪರಿಶೀಲನೆ. ಸದ್ಯ ದಾವಣಗೆರೆ ವಿಧಿವಿಜ್ಞಾನ ಪೊಲೀಸರ ತಂಡ ಆಗಮನಕ್ಕೆ ಕಾಯುತ್ತಿರುವ ಪೊಲೀಸರು. ಕಮಲಮ್ಮನವರ ಕೊಲೆ ಮಾಡಿ ನಗದು ದೋಚಿರುವ ದುಷ್ಕರ್ಮಿಗಳು ಆಭರಣಗಳನ್ನು ತೆಗೆದುಕೊಂಡಿಲ್ಲ. ಇದು ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

- Advertisement -

Related news

error: Content is protected !!