Saturday, May 4, 2024
spot_imgspot_img
spot_imgspot_img

ಮಹಿಳೆಯನ್ನು ಕೊಂದು ಸುಟ್ಟು ಹಾಕಿದ ದುಷ್ಕರ್ಮಿಗಳು..!!

- Advertisement -G L Acharya panikkar
- Advertisement -

ಮಹಿಳೆಯೊಬ್ಬರನ್ನು ಭೀಕರವಾಗಿ ಹತೈಗೈದು ಶವವನ್ನು ಸುಟ್ಟು ಹಾಕಿದ ಘಟನೆ ರಾಯಚೂರಿನ ಲಿಂಗಸಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ನಡೆದಿದೆ.

ಕೊಲೆಯಾದ ಮಹಿಳೆಯನ್ನು ಹಟ್ಟಿ ಚಿನ್ನದ ಗಣಿ ಕಂಪನಿಯ ಸರಕಾರಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿದ್ದ ಮಂಜುಳಾ(45)ಎಂದು ಗುರುತಿಸಲಾಗಿದೆ.

ಮನೆಯಿಂದ 100 ಮೀಟರ್ ದೂರದಲ್ಲಿ ಈ ಕೃತ್ಯ ನಡೆದಿದ್ದು, ಹತ್ಯೆ ಬಳಿಕ ಹಂತಕರು ಮಹಿಳೆಯ ಶವವನ್ನು ಸುಟ್ಟ ಹಾಕಿದ್ದಾರೆ. ಮನೆಯಿಂದ ಹೊರಗೆ ಕರೆಸಿ ಕೊಲೆ ಮಾಡಿರುವ ಶಂಕೆ ಇದೆ. ಬೆಳಗಿನ ಜಾವ 2-3 ಗಂಟೆಗೆ ಕೊಲೆ ನಡೆದಿರಬಹುದು ಎನ್ನಲಾಗಿದೆ.

ಮಂಜುಳಾರವರು ಕೆಲವು ವರ್ಷಗಳ ಹಿಂದೆ ಪತಿಯನ್ನು ಕಳೆದುಕೊಂಡಿದ್ದು, ಅವರು ಹಟ್ಟಿ ಪಟ್ಟಣದ ಜಿ.ಆರ್.ಕಾಲೋನಿಯಲ್ಲಿ ಮಕ್ಕಳೊಂದಿಗೆ ವಾಸಿಸುತ್ತಿದ್ದರು. ಸ್ಥಳಕ್ಕೆ ಹಟ್ಟಿ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ತನಿಖೆ ಮುಂದುವರೆಸಿದ್ದಾರೆ.

- Advertisement -

Related news

error: Content is protected !!