Monday, April 29, 2024
spot_imgspot_img
spot_imgspot_img

ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು..!

- Advertisement -G L Acharya panikkar
- Advertisement -

ಶಾಲಾ ಶಿಕ್ಷಕಿಯರ ವರ್ತನೆಗೆ ಬೇಸತ್ತು 8ನೇ ತರಗತಿ ವಿದ್ಯಾರ್ಥಿನಿ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ಬಾಗಲಕೋಟೆ ತಾಲೂಕಿನ ಕದಾಂಪುರ ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿದ ಬಾಲಕಿ ದಿವ್ಯಾ ಬಾರಕೇರ (14) ಎಂದು ಗುರುತಿಸಲಾಗಿದೆ.

8ನೇ ತರಗತಿ ಓದುತ್ತಿದ್ದ ದಿವ್ಯಾ ಬಾರಕೇರ ಮೇಲೆ ಶಾಲಾ ಶಿಕ್ಷಕಿಯರು ಕಳ್ಳತನ ಮಾಡಿದ ಆರೋಪ ಹೊರಿಸಿದ್ದಾರೆ. ಕದ್ದ ಹಣ ಚೆಕ್ ಮಾಡಲು ಬಾಲಕಿಯನ್ನು ಶಿಕ್ಷಕಿಯರು ಬಟ್ಟೆ ಬಿಚ್ಚಿದ್ದರು ಎಂದು ಆರೋಪಿಸಲಾಗಿದೆ. ಕಳ್ಳತನದ ಅನುಮಾನಕ್ಕೆ ಬಾಲಕಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ದೂರು ನೀಡಲಾಗಿದೆ.

ಕಳೆದ ಮಾರ್ಚ್ 14 ರಂದು ಶಿಕ್ಷಕಿಯೊಬ್ಬರ 2 ಸಾವಿರ ರೂಪಾಯಿ ಹಣ ಕಳೆದು ಹೋಗಿತ್ತು. ಆಗ ಶಿಕ್ಷಕಿಯರು ಕೆಲವು ವಿದ್ಯಾರ್ಥಿಗಳ‌ ಮೇಲೆ ಸಂಶಯ ಬಂದು ದೇವರ ಮೇಲೆ ಆಣೆ ಮಾಡಿಸಿದ್ರು. ಮಾರ್ಚ 15 ರಂದು ಪುನಃ ಬಟ್ಟೆ ಬಿಚ್ಚಿಸಿ ಚೆಕ್ ಮಾಡಿದ್ದಾರೆ. ಇದರಿಂದ‌ ಮನನೊಂದ ವಿದ್ಯಾರ್ಥಿನಿ ಮಾರ್ಚ್ 16ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.

ಬಾಲಕಿಯ ಕುಟುಂಬಸ್ಥರು ಇಬ್ಬರು ಶಿಕ್ಷಕಿಯರ ವಿರುದ್ಧ ಬಾಗಲಕೋಟೆ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಮತ್ತೊಂದೆಡೆ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ರೂ ಕುಟುಂಬಸ್ಥರು ಮುಚ್ಚಿಟ್ಟಿದ್ದಾರೆ. ಶವ ಸಂಸ್ಕಾರ ಮಾಡಿದ ಬಳಿಕ ಬಾಲಕಿ ಕುಟುಂಬಸ್ಥರು ದೂರು ನೀಡಿದ್ದಾರೆ. ಸಾಕ್ಷಿ ನಾಶದ ಹಿನ್ನೆಲೆಯಲ್ಲಿ ಕುಟುಂಬಸ್ಥರ ಮೇಲೂ ಪೊಲೀಸರು ದೂರು ದಾಖಲಿಸಿಕೊಳ್ಳಲು‌ ಮುಂದಾಗಿದ್ದಾರೆ.

- Advertisement -

Related news

error: Content is protected !!