Saturday, May 4, 2024
spot_imgspot_img
spot_imgspot_img

ಹಾಡಹಗಲೇ ಚಿನ್ನದಂಗಡಿ ಮಾಲೀಕನ ಮೇಲೆ ಗುಂಡಿನ ದಾಳಿ

- Advertisement -G L Acharya panikkar
- Advertisement -

ಚಿನ್ನದ ಮಳಿಗೆ ಮಾಲೀಕನ ಮೇಲೆ ಹಾಡಹಗಲೇ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಘಟನೆ ಬೆಂಗಳೂರಿನ ದೇವಿನಗರದಲ್ಲಿ ನಡೆದಿದೆ.

ಎರಡು ಬೈಕ್‍ಗಳಲ್ಲಿ ಬಂದ ನಾಲ್ಕು ಮಂದಿ ದುಷ್ಕರ್ಮಿಗಳಲ್ಲಿ, ಇಬ್ಬರು ಇಳಿದು ಗುಂಡಿನ ದಾಳಿ ಮಾಡಿದ್ದಾರೆ. ಈ ವೇಳೆ ಅಂಗಡಿ ಮಾಲೀಕ ಅಪ್ಪುರಾಮ್ ಎಂಬವರ ಹೊಟ್ಟೆಗೆ ಗುಂಡು ತಗುಲಿದೆ. ಅಲ್ಲದೇ ಅಂತರಾಮ್ ಎಂಬವರ ಕಾಲಿಗೆ ಗುಂಡು ತಗುಲಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪ್ಪುರಾಮ್ ಸ್ಥಿತಿ ಗಂಭೀರವಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕಮಿಷನರ್ ದಯಾನಂದ್, 11 ಗಂಟೆ ವೇಳೆಗೆ ನಾಲ್ವರು ಆರೋಪಿಗಳು ಬಂದು ಇಬ್ಬರ ಮೇಲೆ ಫೈರಿಂಗ್ ಮಾಡಿದ್ದಾರೆ. ಸದ್ಯ ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ , ಕಮಿಷನರ್ ದಯಾನಂದ್ ಹಾಗೂ ಕೋಡಿಗೆಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!