- Advertisement -
- Advertisement -
ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಆಕಸ್ಮಿಕವಾಗಿ ವ್ಯಕ್ತಿ ಓರ್ವ ಸ್ಕೂಟರ್ ಸಮೇತ ದಕ್ಕೆ ಬಳಿಯ ನೀರಿಗೆ ಬಿದ್ದು ಮುಳುಗಡೆಗೊಂಡು ಕಣ್ಮರೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ.
ನೀರಿಗೆ ಬಿದ್ದ ವ್ಯಕ್ತಿ ತಮಿಳುನಾಡು ಮೂಲದ ಮೀನುಗಾರನಾಗಿದ್ದು ಮಲ್ಪೆಯ ಬೋಟು ಒಂದರಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದ ಎನ್ನಲಾಗಿದೆ. ಇನ್ನು ನೀರಿಗೆ ಬಿದ್ದ ಮಾಹಿತಿ ತಿಳಿದು ತಕ್ಷಣ ಈಶ್ವರ್ ಮಲ್ಪೆ ಅವರು ಧಾವಿಸಿ ಬಂದು ನೀರಿಗೆ ಧುಮುಕಿ ಎಲ್ಲ ಕಡೆ ಜಾಲಾಡಿದರೂ ಆತನ ದೇಹ ಸಿಗಲಿಲ್ಲ. ಆದರೆ ಸ್ಕೂಟರ್ ಮಾತ್ರ ಪತ್ತೆಯಾಗಿದ್ದು ಹಗ್ಗದ ಸಹಾಯದಿಂದ ಮೇಲಕ್ಕೆ ತರಲಾಗಿದೆ.
- Advertisement -