- Advertisement -
![G L Acharya G L Acharya](https://vtvvitla.com/wp-content/uploads/2023/07/gl_acharya.jpeg)
![panikkar panikkar](https://vtvvitla.com/wp-content/uploads/2020/07/panikkar.jpeg)
- Advertisement -
![](https://vtvvitla.com/wp-content/uploads/2024/04/vigneshwara-new-683x1024.jpeg)
![](https://vtvvitla.com/wp-content/uploads/2021/10/indane-gas-1024x606.jpg)
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪಲ್ಟಿಯಾದ ಘಟನೆ ಪೊಳಲಿ ಕಮ್ಮಾಜೆ ಸಮೀಪದ ಕಾಗುಡ್ಡೆ ಎಂಬಲ್ಲಿ ನಡೆದಿದೆ.
ಬಿಸಿರೋಡಿನಿಂದ ಕಲ್ಪನೆ ಮಾರ್ಗವಾಗಿ ಕೊಳತ್ತಮಜಲು ಮೂಲಕ ಮಂಗಳೂರು ಸಂಚಾರ ಮಾಡುವ ಖಾಸಗಿ ಬಸ್ ಪಲ್ಟಿಯಾಗಿದೆ. ಅದೃಷ್ಟವಶಾತ್ ಬಸ್ ನೊಳಗಿದ್ದ ಇಬ್ಬರು ಪ್ರಯಾಣಿಕರಿಗೆ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಬಸ್ ನ ಚಾಲಕ ನಿರ್ವಾಹಕ ಇಬ್ಬರಿಗೆ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಬಸ್ ನ ಮುಂಭಾಗದ ಗಾಜು ಪುಡಿಗೈದು ಪ್ರಯಾಣಿಕರು ಹೊರಬಂದಿದ್ದಾರೆ.ಆದಿತ್ಯವಾರ ಆದ ಕಾರಣ ಬಸ್ ನಲ್ಲಿ ಕೇವಲ ಎರಡು ಜನ ಮಾತ್ರ ಪ್ರಯಾಣಿಕರಿದ್ದರು. ಆದರೆ ಅವರಿಗೆ ಯಾವುದೇ ಗಾಯವಾಗದೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
- Advertisement -