Saturday, June 28, 2025
spot_imgspot_img
spot_imgspot_img

ಪುತ್ತೂರು: ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಕಾರಿನ ಮೇಲೆ ಸಾರ್ವಜನಿಕರಿಂದ ದಾಳಿ : ಆರೋಪಿಗಳು ಪರಾರಿ

- Advertisement -
- Advertisement -

ಪುತ್ತೂರು: ಹಿಂಸಾತ್ಮಕವಾಗಿ ದನ ಸಾಗಾಟ ಮಾಡುತ್ತಿದ್ದ ಕಾರು ಅಪಘಾತಗೊಂಡ ಸ್ಥಿತಿಯಲ್ಲಿ ಕಬಕದಿಂದ ಪದ್ಮಡ್ಕ ಕಲ್ಲಂಡ್ಕ ಸಂಪರ್ಕ ರಸ್ತೆಯಲ್ಲಿ ನಿನ್ನೆ ರಾತ್ರಿ ಪತ್ತೆಯಾಗಿದೆ.

ಕಾರಿನಲ್ಲಿ ನಾಲ್ಕು ಗೋವುಗಳು ಪತ್ತೆಯಾಗಿದ್ದು, ಕಾರು ಚಾಲಕ ಹಾಗೂ ಕಾರಿನಲ್ಲಿದ್ದವರು ಕಾರು ಹಾಗೂ ಗೋವುಗಳನ್ನು ಬಿಟ್ಟು ಪರಾರಿಯಾಗಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ.

ಬಜರಂಗದಳ ಕಬಕದ ಕಾರ್ಯಕರ್ತರು ಕಾರನ್ನು ತಡೆಯಲು ಪ್ರಯತ್ನಿಸಿದಾಗ ಕಾರಿನ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದು ಜಖಂಗೊಂಡಿದೆ ಎಂದು ಹೇಳಲಾಗಿದೆ.

ಕಾರಿನಲ್ಲಿ ಎರಡು ದನ ಹಾಗೂ ಎರಡು ಕರು ಪತ್ತೆಯಾಗಿದೆ. ಅದರ ಕೈ ಕಾಲುಗಳನ್ನು ಹಿಂಸಾತ್ಮಕ ರಿತಿಯಲ್ಲಿ ಕಟ್ಟಲಾಗಿತ್ತು. ಹಿಂಸಾತ್ಮಕವಾಗಿ ಗೋವುಗಳನ್ನು ಸಾಗಿಸುತ್ತಿರುವ ಖಚಿತ ಮಾಹಿತಿ ಪಡೆದ ಬಜರಂಗದಳ ಕಬಕದ ಕಾರ್ಯಕರ್ತರು ಕಾರನ್ನು ನಿಲ್ಲಿಸಲು ಸೂಚಿಸಿದ್ದು, ಈ ವೇಳೆ ಕಣ್ಣಿಗೆ ಮಣ್ಣೆರೆಚಿ ಕಾರು ಚಾಲಕ ಪರಾರಿಯಾಗಲು ಯತ್ನಿಸಿದ್ದು ಇದರಿಂದ ಚಾಲಕ ತನ್ನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದಿದೆ.

ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಠಾಣಾ ಪೊಲೀಸ್ ಅಧಿಕಾರಿಗಳು 4 ಗೋವುಗಳನ್ನು ಮತ್ತು ಜಖಂಗೊಂಡ ವಾಹನವನ್ನು ಪುತ್ತೂರು ನಗರ ಠಾಣೆಗೆ ತರಲಾಯಿತು. ರಕ್ಷಿಸಿದ ಗೋವುಗಳಿಗೆ ನೀರು ಮತ್ತು ಮೇವಿನ ವ್ಯವಸ್ತೆಯನ್ನು ಬಜರಂಗದಳದ ಕಾರ್ಯಕರ್ತರ ವ್ಯವಸ್ಥೆ ಮಾಡಿರುತ್ತಾರೆ.

- Advertisement -

Related news

error: Content is protected !!