Wednesday, May 1, 2024
spot_imgspot_img
spot_imgspot_img

ಸ್ಪಂದನಾ ಪಾರ್ಥಿವ ಶರೀರ ಪಂಚಭೂತಗಳಲ್ಲಿ ಲೀನ; ಪತ್ನಿಗೆ ಕಣ್ಣೀರ ವಿದಾಯ ಹೇಳಿದ ಚಿನ್ನಾರಿ ಮುತ್ತ

- Advertisement -G L Acharya panikkar
- Advertisement -

ಸ್ಯಾಂಡಲ್‌ವುಡ್ ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಅವರ ಅಂತ್ಯಕ್ರಿಯೆ ಇಂದು (ಆಗಸ್ಟ್ 9) ಹರಿಶ್ಚಂದ್ರ ಘಾಟ್‌ನಲ್ಲಿ ನೆರವೇರಿತು. ಈಡಿಗ ಪದ್ಧತಿಯಂತೆ ಸ್ಪಂದನಾ ಅವರ ಅಂತ್ಯಕ್ರಿಯೆ ಮಾಡಲಾಯಿತು. ಪತ್ನಿಯ ಅಂತಿಮ ವಿದಾಯದ ವೇಳೆ ವಿಜಯ ರಾಘವೇಂದ್ರ ಭಾವುಕರಾದರು

ಬ್ಯಾಂಕಾಕ್​ನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಅಂತ್ಯಕ್ರಿಯೆ ಈಡಿಗ ಬಿಲ್ಲವ ಸಮುದಾಯ ಸಂಪ್ರದಾಯದಂತೆ ನೆರವೇರಿತು. ಅಂತಿಮ ವಿಧಿ-ವಿಧಾನಗಳನ್ನು ಪತಿ ಹಾಗೂ ಪುತ್ರ ಶೌರ್ಯ ಪೂರೈಸಿದರು. ಬೆಂಗಳೂರಿನ ಶ್ರೀರಾಂಪರದ ಹರಿಶ್ಚಂದ್ರ ಘಾಟ್​ನಲ್ಲಿ ಸ್ಪಂದನಾ ಸ್ಪಂದನಾ ಪಂಚಭೂತಗಳಲ್ಲಿ ಲೀನವಾದರು.

ನಿನ್ನೆ (ಆಗಸ್ಟ್​ 8) ರಾತ್ರಿ ಸ್ಪಂದನಾ ಮೃತದೇಹವನ್ನು ಬೆಂಗಳೂರಿಗೆ ತರಲಾಯ್ತು. ಮಧ್ಯಾಹ್ನದವರೆಗೆ ಮಲ್ಲೇಶ್ವರಂನಲ್ಲಿರುವ ಸ್ಪಂದನಾ ತವರು ಮನೆ ಬಳಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಅನೇಕ ಸ್ಯಾಂಡಲ್​ವುಡ್​ ಸೆಲೆಬ್ರೆಟಿಗಳು ಹಾಗೂ ರಾಜಕೀಯ ಗಣ್ಯರು ಅಂತಿಮ ದರ್ಶನ ಪಡೆದರು.

- Advertisement -

Related news

error: Content is protected !!