Wednesday, May 1, 2024
spot_imgspot_img
spot_imgspot_img

ಹಾಡಹಗಲೇ ಜ್ಯುವೆಲ್ಲರಿ ಶಾಪ್‌ಗೆ ನುಗ್ಗಿದ ದರೋಡೆಕೋರರು; ಶಾಪ್‌ ಮಾಲೀಕನ ಮೇಲೆ ಗುಂಡಿನ ದಾಳಿ ನಡೆಸಿ ಚಿನ್ನ ದೋಚಿ ಪರಾರಿ

- Advertisement -G L Acharya panikkar
- Advertisement -

ಹಾಡಹಗಲೇ ದುಷ್ಕರ್ಮಿಗಳು ಚಿನ್ನಾಭರಣ ಅಂಗಡಿ ಮಾಲೀಕನ ಮೇಲೆ ಗುಂಡಿನ ದಾಳಿ ನಡೆಸಿ, ಚಿನ್ನ ದೋಚಿ ಪರಾರಿಯಾದ ಘಟನೆ ಸಿಲಿಕಾನ್‌ ಸಿಟಿಯಲ್ಲಿ ನಡೆದಿದೆ. ಗುಂಡಿನ ದಾಳಿಯಿಂದ ಅಂಗಡಿ ಮಾಲೀಕ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯ ಪೈಪ್ ಲೈನ್ ರಸ್ತೆಯಲ್ಲಿರುವ ಜ್ಯುವೆಲ್ಲರಿ ಶಾಪ್‌ನಲ್ಲಿ ಬೆಳಗ್ಗೆ 10:45ರ ಸುಮಾರಿಗೆ ಘಟನೆ ನಡೆದಿದೆ. ಶಾಪ್​ ಮಾಲೀಕ ಮನೋಜ್ ಲೋಹರ್ (30) ಗುಂಡಿನ ದಾಳಿಯಿಂದ ಗಾಯಗೊಂಡವರು.

ಬೆಳಗ್ಗೆ 2 ದ್ವಿಚಕ್ರ ವಾಹನಗಳಲ್ಲಿ ಮಾರಕಾಸ್ತ್ರಗಳ ಸಹಿತ ಬ್ಯಾಡರಹಳ್ಳಿ ವ್ಯಾಪ್ತಿಯ ವಿನಾಯಕ ಜ್ಯುವೆಲ್ಲರಿ ಶಾಪ್​ ಬಳಿ ಬಂದ ಆರೋಪಿಗಳು, ಮಾಲೀಕ ಮನೋಜ್ ನನ್ನು ಬೆದರಿಸಿ ದರೋಡೆಗೆ ಯತ್ನಿಸಿದ್ದಾರೆ. ಮನೋಜ್ ತಡೆಯುವ ಪ್ರಯತ್ನ ಮಾಡಿದಾಗ ಆತನ ತೊಡೆಗೆ ಗುಂಡು ಹಾರಿಸಿ, ಶಾಪ್​ನಲ್ಲಿದ್ದ ಒಂದು ‌ಕೆ.ಜಿಯಷ್ಟು ಚಿನ್ನಾಭರಣ ದೋಚಿದ್ದಾರೆ.

ಬಂಗಾರ ದೋಚಿದ ಬಳಿಕ ಪರಾರಿಯಾಗಲು ಯತ್ನಿಸಿದ್ದ ಆರೋಪಿಗಳನ್ನು ಮನೋಜ್ ತಡೆಯಲು ಯತ್ನಿಸಿದ್ದಾರೆ. ಆಗ ಎಚ್ಚೆತ್ತ ದುಷ್ಕರ್ಮಿಗಳು ತಾವು ತಂದಿದ್ದ ಒಂದು‌ ಬೈಕ್ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಬ್ಯಾಡರಹಳ್ಳಿ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ. ಗಾಯಾಳು ಮನೋಜ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!