ವಿಟ್ಲ: ಸ್ಕೂಟರ್ ಸ್ಕಿಡ್ಡಾಗಿ ಬಿದ್ದು ಸಹಸವಾರ ಗಾಯಗೊಂಡಿರುವ ಘಟನೆ ಬಂಟ್ವಾಳ ತಾಲೂಕು ಕೇಪು ಗ್ರಾಮದ ಕುಕ್ಕೆಬೆಟ್ಟು ಎಂಬಲ್ಲಿ ನಡೆದಿದೆ.
ಗಾಯಗೊಂಡಿರುವ ಸಹಸವಾರನನ್ನು ಪುಣಚ ಗ್ರಾಮ, ಬಂಟ್ವಾಳ ನಿವಾಸಿ ಉಮೇಶ್ ಪಿ (36) ಎಂದು ಗುರುತಿಸಲಾಗಿದೆ.
ದಿನಾಂಕ: 26-01-2024 ರಂದು ರಾತ್ರಿ ಸ್ಕೂಟರ್ ಸವಾರ ಬಾಬು ನಾಯ್ಕ ಕೆ ಎಂಬವರು, KA-19-EQ-6149ನೇ ನೋಂದಣಿ ನಂಬ್ರದ ಸ್ಕೂಟರಿನಲ್ಲಿ ಉಮೇಶ್ರವರನ್ನು ಸಹಸವಾರರನ್ನಾಗಿ ಕುಳ್ಳಿರಿಸಿಕೊಂಡು, ಬಂಟ್ವಾಳ ತಾಲೂಕು ಕೇಪು ಗ್ರಾಮದ ಕುಕ್ಕೆಬೆಟ್ಟು ಎಂಬಲ್ಲಿ ಹೋಗುವಾಗ, ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಒಮ್ಮೆಲೆ ಬ್ರೇಕ್ ಹಾಕಿದ ಪರಿಣಾಮ, ಸ್ಕೂಟರ್ ಸ್ಕಿಡ್ಡಾಗಿ ಬಿದ್ದು, ಉಮೇಶ್ರವರು ಗಾಯಗೋಡಿರುತ್ತಾರೆ ಹಾಗೂ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದುಕೊಂಡಿದ್ದು, ನಂತರ ನೋವು ಜಾಸ್ತಿಯಾದ ಕಾರಣ ಹೆಚ್ಚಿನ ಚಿಕಿತ್ಸೆ ಬಗ್ಗೆ ಪುತ್ತೂರು ಹಿತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ದಾಖಲಾಗಿರುತ್ತಾರೆ. ಘಟನೆ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ 19/2024 ಕಲಂ: 279, 337 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.