

ನಾಲ್ಕು ದಿನಗಳ ಹಿಂದೆ ಕುಡಿದ ಮತ್ತಿನಲ್ಲಿ ತಂದೆ-ತಾಯಿಯನ್ನು ಬರ್ಬರವಾಗಿ ಕೊಲೆಗೈದು ಪರಾರಿಯಾಗಿದ್ದ ಮಗನನ್ನು ಕೊನೆಗೂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಶರತ್ (26) ಬಂಧಿತ ಹಂತಕ. ಈತ ಕಳೆದ ಮಂಗಳವಾರ ತಂದೆ-ತಾಯಿ ಹತ್ಯೆ ಮಾಡಿ ತಲೆಮರೆಸಿಕೊಂಡಿದ್ದ. ಸದ್ಯ ಕೋಡಿಗೆಹಳ್ಳಿ ಪೊಲೀಸರು ಕೊಡಗು ಜಿಲ್ಲೆಯಲ್ಲಿದ್ದವನನ್ನು ಹುಡುಕಿ ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದಾರೆ.
ಕೊಲೆಯಾದ ತಂದೆಯನ್ನು ಮಂಗಳೂರು ಮೂಲದ ಭಾಸ್ಕರ್(64) ಹಾಗೂ ಕೇಂದ್ರ ಸರ್ಕಾರಿ ನಿವೃತ್ತ ಉದ್ಯೋಗಿ ಶಾಂತಾ(60) ಎಂದು ಗುರುತಿಸಲಾಗಿದೆ.
ವಿಚಾರಣೆಯ ವೇಳೆ, ಪೋಷಕರು ತನ್ನ ಬಗ್ಗೆ ನೆಗ್ಲೆಕ್ಟ್ ಮಾಡುತ್ತಿದ್ದರು. ಈ ಕಾರಣಕ್ಕಾಗಿ ತಾನು ಅವರನ್ನು ಕೊಲೆ ಮಾಡಿರುವುದಾಗಿ ಶರತ್ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ. ಘಟನೆಯ ಬಳಿಕ ಕೊಡಗಿನ ಕಡೆಗೆ ಹೋಗಿರುವ ಈತ ಕಳೆದ ಮೂರು ದಿನದಿಂದ ಕಾರಿನಲ್ಲೆ ದಿನ ಕಳೆದಿರೋದು ಪೊಲೀಸರ ತನಿಖೆಯ ವೇಳೆ ಬಹಿಂಗವಾಗಿದೆ. ಸದ್ಯ ಆರೋಪಿ ಶರತ್ನನ್ನು ಕೋಡಿಗೆಹಳ್ಳಿ ಪೊಲೀಸರು ಹೆಚ್ಚಿನ ತನಿಖೆಗೆ ಒಳಪಡಿಸಿದ್ದಾರೆ.
ಏನಿದು ಪ್ರಕರಣ..?
ಮಂಗಳೂರು ಮೂಲದ ಈ ಕುಟುಂಬ ಬೆಂಗಳೂರಿನಲ್ಲಿ ನೆಲೆಸಿತ್ತು. ಇವರಿಗೆ ಇಬ್ಬರು ಮಕ್ಕಳಿದ್ದು ಹಿರಿಯ ಮಗ ಖಾಸಗಿ ಕಂಪನಿಯನ್ನು ಉದ್ಯೋಗ ಮಾಡಿಕೊಂಡಿದ್ದಾನೆ. ಆರೋಪಿ ಶರತ್ ಕಿರಿಯ ಪುತ್ರ ಎಂದು ಗುರುತಿಸಲಾಗಿದೆ. ಕೊಲೆ ನಂತರ ಆರೋಪಿ ಶರತ್ ನಾಪತ್ತೆಯಾಗಿದ್ದ.
ಬೆಳಗ್ಗೆ ಉದ್ಯೋಗಕ್ಕೆ ತೆರಳಿದ್ದ ಹಿರಿಯ ಮಗ ತಂದೆ-ತಾಯಿಗೆ ಕರೆ ಮಾಡಿದ್ದಾನೆ. ಯಾರೂ ಫೋನ್ ರಿಸೀವ್ ಮಾಡದಿದ್ದಾಗ ಪಕ್ಕದ ಮನೆಯವರಿಗೆ ಕರೆ ಮಾಡಿ ಪೋಷಕರ ಬಗ್ಗೆ ವಿಚಾರಿಸಿದ್ದಾನೆ. ಪಕ್ಕದ ಮನೆಯವರು ಬಂದು ನೋಡಿದಾಗ ಕೊಲೆ ನಡೆದಿರೋದು ಬೆಳಕಿಗೆ ಬಂದಿದೆ. ಶರತ್ ಮಾನಸಿಕವಾಗಿ ನೊಂದಿದ್ದು, ಪೋಷಕರೊಂದಿಗೆ ಆಗಾಗ್ಗೆ ಜಗಳವಾಡುತ್ತಿದ್ದ. 20 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದರು. ಶರತ್ ಯಾವಾಗಲೂ ಮನೆಯಲ್ಲಿಯೇ ಇರುತ್ತಿದ್ದನು. ಕೆಲಸವಿಲ್ಲದೇ ಮನೆಯಲ್ಲಿರುತ್ತಿದ್ದ ಶರತ್ ವರ್ತನೆ ಸೈಕೋ ರೀತಿಯಲ್ಲಿತ್ತು ಎಂದು ತಿಳಿದು ಬಂದಿದೆ.