Friday, June 27, 2025
spot_imgspot_img
spot_imgspot_img

ಬಂಟ್ವಾಳ : ಬಿ.ಸಿ.ರೋಡಿನಲ್ಲಿ ನಿಲ್ಲಿಸಿದ್ದ ವಿಟ್ಲ ಮೂಲದ ವ್ಯಕ್ತಿಯ ದ್ವಿಚಕ್ರ ವಾಹನ ಕಳವು

- Advertisement -
- Advertisement -

ಬಂಟ್ವಾಳ : ಬಿ ಸಿ ರೋಡಿನ ಮೇಲ್ಸೇತುವೆ ಕೆಳಗೆ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವಾಗಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಟ್ಲಪಡ್ನೂರು ಗ್ರಾಮದ ಕೊಡಂಗಾಯಿ ನಿವಾಸಿ ಉದಯ ನಾರಾಯಣ ಭಟ್ ಅವರು ತನ್ನ ಸುಜುಕಿ ಝ್ಯೂ ಮಾದರಿಯ ದ್ವಿಚಕ್ರ ವಾಹನವನ್ನು ಬಿ ಮೂಡ ಗ್ರಾಮದ ಬಿ ಸಿ ರೋಡು ಮೇಲ್ಸೇತುವೆ ಕೆಳಗೆ ನಿಲ್ಲಿಸಿ ಸಕಲೇಶಪುರಕ್ಕೆ ತೆರಳಿದ್ದರು. ಎರಡು ದಿನ ಕಳೆದು ವಾಪಾಸು ಬಂದು ನೋಡಿದಾಗ ದ್ವಿಚಕ್ರ ವಾಹನ ನಾಪತ್ತೆಯಾಗಿರುತ್ತದೆ. ಈ ಬಗ್ಗೆ ಬಂಟ್ವಾಳ ಪರಿಸರದಲ್ಲಿ ಹುಡುಕಾಡಿದರೂ ಪತ್ತೆಯಾಗದ ಹಿನ್ನಲೆಯಲ್ಲಿ ಇದೀಗ ಬಂಟ್ವಾಳ ನಗರ ಪೊಲೀಸರಿಗೆ ದೂರು ನೀಡಿದ್ದಾರೆ.

- Advertisement -

Related news

error: Content is protected !!