- Advertisement -
- Advertisement -
ಈಜಲು ತೆರಳಿದ್ದ ಇಬ್ಬರು ಬಾಲಕರು ನೀರು ಪಾಲಾಗಿರುವ ಘಟನೆ ಬ್ಯಾಡಗಿ ತಾಲೂಕಿನ ಘಾಲಪೂಜೆ ಗ್ರಾಮದಲ್ಲಿ ನಡೆದಿದೆ.
ನೀರು ಪಾಲಾದ ಬಾಲಕರನ್ನು ನಾಗರಾಜ (11), ಹೇಮಂತ (12) ಎಂದು ಗುರುತಿಸಲಾಗಿದೆ.
ನೀರಿನ ಹೊಂಡದಲ್ಲಿ ಈಜಲು ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಕಾಗಿನೆಲೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಗ್ರಾಮಸ್ಥರು ನೀರಿನಿಂದ ಬಾಲಕರ ಮೃತದೇಹ ಹೊರ ತೆಗೆದಿದ್ದಾರೆ. ಈ ಘಟನೆ ಸಂಬಂಧ ಕಾಗಿನೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -