- Advertisement -
- Advertisement -
ಸಿಲಿಂಡರ್ಗಳನ್ನು ಹೊತ್ತೊಯ್ಯುತ್ತಿದ್ದ ವಾಹನ ಪಲ್ಟಿಯಾದ ಪರಿಣಾಮ ಸಿಲಿಂಡರ್ ಸಪ್ಲೈಯರ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ವಿಜಯನಗರದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಹಿರೇಹಡಗಲಿ ಗ್ರಾಮದ ಬೀರಬ್ಬಿ ಕಾಶಿಂ ಸಾಬ್ (40) ಎಂದು ಗುರುತಿಸಲಾಗಿದೆ.
ಚಾಲಕನ ನಿಯಂತ್ರಣ ತಪ್ಪಿ ಸಿಲಿಂಡರ್ ವಾಹನ ಪಲ್ಟಿಯಾಗಿದೆ. ಹಿರೆಹಡಗಲಿ ಮೂಲಕ ವಿವಿಧ ಗ್ರಾಮಗಳಿಗೆ ಕಾಶಿಂಸಾಬ್ ಸಿಲಿಂಡರ್ ಸರಬರಾಜು ಮಾಡುತ್ತಿದ್ದರು. ಪಲ್ಟಿಯಾದ ವಾಹನ ಹಿರೇಹಡಗಲಿ ಗ್ರಾಮ ಭಾರತ್ ಗ್ಯಾಸ್ ಏಜೆನ್ಸಿಗೆ ಸೇರಿದ್ದು ಎನ್ನಲಾಗಿದೆ.
ಅದೃಷ್ಟವಶಾತ್ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಸ್ಫೋಟಗೊಂಡಿಲ್ಲ. ಸಿಲಿಂಡರ್ ವಾಹನ ಪಲ್ಟಿಯಾದ ವೇಳೆ ಅಕ್ಕ-ಪಕ್ಕ ಯಾರು ಇರಲಿಲ್ಲ. ಇಲ್ಲದಿದ್ದರೆ ಇನ್ನಷ್ಟು ಸಾವು-ನೋವಿಗೆ ಕಾರಣವಾಗುತ್ತಿತ್ತು. ಸ್ಥಳಕ್ಕೆ ಹಿರೇಹಡಗಲಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.
- Advertisement -