Sunday, May 5, 2024
spot_imgspot_img
spot_imgspot_img

ಮಂಗಳೂರು: ವಿಷ ಜಂತು ಕಡಿತಕ್ಕೊಳಗಾದವರಿಗೆ ಈ ಬಾವಿಯ ನೀರೇ ಸಂಜೀವಿನಿ!

- Advertisement -G L Acharya panikkar
- Advertisement -

ಮಂಗಳೂರು: ಈ ಬಾವಿಯ ನೀರು ಎಲ್ಲಾ ಬಾವಿಗಳಲ್ಲಿ ಸಿಗುವ ಮಾಮೂಲಿ ನೀರಲ್ಲ. ಬದಲಾಗಿ ಜೀವ ಉಳಿಸುವ ಸಂಜೀವಿನಿ. ಯಾವುದೇ ರೀತಿಯ ವಿಷ ಜಂತುಗಳು ಕಡಿದರೆ ಆ ಬಾವಿಯ ನೀರನ್ನು ಕುಡಿದು, ಅಲ್ಲಿನ ಮಣ್ಣನ್ನು ಹಾಕಿಕೊಂಡರೆ ವಿಷವೆಲ್ಲಾ ಇಳಿದು ಬಿಡುತ್ತದೆ. ಆದರೆ ಆ ಬಾವಿಯ ನೀರು ವರ್ಷಕ್ಕೊಂದು ಬಾರಿ ಮಾತ್ರ ಸಿಗೋದು.

ಹೌದು. ಮಂಗಳೂರಿನ ಕಟೀಲು ಸಮೀಪದ ಶಿಬರೂರು ಎಂಬಲ್ಲಿರುವ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಪವಿತ್ರ ಬಾವಿ ಇದು. ವರ್ಷಕ್ಕೊಂದು ಬಾರಿ ನಡೆಯುವ ಇಲ್ಲಿನ ವಾರ್ಷಿಕ ಜಾತ್ರಾ ಮಹೋತ್ಸವದ ಐದು ದಿನಗಳ ಕಾಲ ಮಾತ್ರ ಈ ಬಾವಿಯ ನೀರನ್ನು ತೆಗೆದು ಭಕ್ತರಿಗೆ ನೀಡಲಾಗುತ್ತದೆ. ಪುರಾತನ ಕಾಲದಲ್ಲಿ ಸ್ಥಳೀಯ ದೈವೀ ವೈದ್ಯರಾದ ತ್ಯಾಂಪಣ್ಣ ಶೆಟ್ಟಿ ಎಂಬವರು ತನ್ನಲ್ಲಿದ್ದ ವಿಷ ಹೀರುವ ಕಲ್ಲೊಂದನ್ನು ಲೋಕದ ಜನತೆಯ ಒಳಿತಿಗಾಗಿ ಈ ಬಾವಿಗೆ ಹಾಕಿದ್ದಾರೆ. ಹೀಗಾಗಿ ಆ ಶಕ್ತಿಯಿಂದಲೇ ಈ ಬಾವಿಯ ನೀರು ಯಾವುದೇ ರೀತಿಯ ವಿಷವನ್ನು ಹೀರಿಕೊಳ್ಳುತ್ತದೆ ಅನ್ನುವ ನಂಬಿಕೆ. ಹಿಂದಿನ ಕಾಲದಿಂದ ಇಂದಿನವರೆಗೂ ಉಳಿದುಕೊಂಡು ಬಂದಿದೆ.

ಜಾತ್ರಾ ಮಹೋತ್ಸವದ 5 ದಿನದಲ್ಲಿ ಈ ದೈವಸ್ಥಾನಕ್ಕೆ ಲಕ್ಷಾಂತರ ಭಕ್ತರು ಈ ಪವಿತ್ರ ನೀರನ್ನು ಕೊಂಡೊಯ್ಯಲು ಬರುತ್ತಾರೆ. ವರ್ಷದಲ್ಲಿ ಒಂದು ಸಲ ಮಾತ್ರ ಸಿಗುವ ನೀರನ್ನು ಅಲ್ಲೇ ತೀರ್ಥ ರೂಪದಲ್ಲಿ ಕುಡಿದು ನಂತರ ಕೊಂಡೊಯ್ಯುದು ಮನೆಯಲ್ಲಿ ಸಂಗ್ರಹಿಸಿಡುತ್ತಾರೆ. ಈ ನೀರನ್ನು ಕುಡಿಯುವುದರಿಂದ ವರ್ಷವಿಡೀ ದೇಹದಲ್ಲಿದ್ದ ವಿಷಕಾರಿ ಅಂಶಗಳು ಹೋಗುತ್ತದೆ. ಜೊತೆಗೆ ವಿಷಜಂತುಗಳು ಕಡಿದಂತಹ ಸಂದರ್ಭದಲ್ಲಿ ತಕ್ಷಣ ಈ ನೀರನ್ನು ಕುಡಿದು ನಂತರ ಈ ಕ್ಷೇತ್ರದಲ್ಲೇ ಸಿಗುವ ಮಣ್ಣನ್ನು ನೀರಲ್ಲಿ ಬೆರೆಸಿ ಗಾಯಕ್ಕೆ ಹಚ್ಚಿದರೆ ವಿಷ ಕಾರುತ್ತದೆ ಅನ್ನುವ ನಂಬಿಕೆ ಇಂದಿಗೂ ಉಳಿದಿದೆ. ನಾನಾ ಊರುಗಳಿಂದ ಬರುವ ಭಕ್ತರು ಈ ಆಧುನಿಕ ಯುಗದಲ್ಲೂ ಈ ನಂಬಿಕೆಯನ್ನು ಇಟ್ಟು ನೀರು ಹಾಗೂ ಮಣ್ಣನ್ನು ಕೊಂಡೊಯ್ಯಲು ಮುಗಿ ಬೀಳುತ್ತಾರೆ.

ಈ ಪವಿತ್ರ ನೀರಿಗೆ ಒಂದು ವರ್ಷಗಳ ಕಾಲ ಶಕ್ತಿ ಇರುತ್ತದೆ. ಹೀಗಾಗಿ ಪ್ರತಿ ವರ್ಷವೂ ಹೊಸ ನೀರನ್ನು ಹಾಗೂ ಮಣ್ಣನ್ನು ಕೊಂಡೊಯ್ಯಲು ಭಕ್ತರು ಜಾತ್ರಾ ಸಂದರ್ಭದಲ್ಲಿ ಇಲ್ಲಿಗೆ ಬರುತ್ತಾರೆ. ಇಂದಿಗೂ ಹಳ್ಳಿ ಪ್ರದೇಶದ ಜನ ವಿಷ ಜಂತುಗಳ ಕಡಿತಕ್ಕೊಳಗಾದರೆ ಈ ನೀರು ಹಾಗೂ ಮಣ್ಣಿನ ಮೊರೆ ಹೋಗುತ್ತಾರೆಯೇ ಹೊರತು ಆಸ್ಪತ್ರೆಗೆ ಹೋಗೋದಿಲ್ಲ. ಒಟ್ಟಿನಲ್ಲಿ ಈಗಿನ ಕಾಲದಲ್ಲೂ ಇಂತಹ ನಂಬಿಕೆ ಉಳಿಯಬೇಕಿದ್ದರೆ ಈ ಕ್ಷೇತ್ರದಲ್ಲಿ ಹಾಗೂ ಬಾವಿಯಲ್ಲಿ ದೈವಿ ಶಕ್ತಿ ಇದೆ ಅನ್ನೋದರಲ್ಲಿ ಸಂದೇಹವಿಲ್ಲ.

- Advertisement -

Related news

error: Content is protected !!