Monday, May 6, 2024
spot_imgspot_img
spot_imgspot_img

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಮದುವೆ ಬಸ್; ಮೂವರಿಗೆ ಗಂಭೀರ ಗಾಯ

- Advertisement -G L Acharya panikkar
- Advertisement -

ಮದುವೆಗೆ ಹೊರಟ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸಮೀಪ ನಡೆದಿದೆ.

ಹನುಮಕ್ಕ(65), ಲಕ್ಷ್ಮೀದೇವಮ್ಮ (55), ಹನುಮಯ್ಯ (71) ಗಂಭೀರ ಗಾಯಗೊಂಡವರು. ಮಧುಗಿರಿ ತಾಲೂಕಿನ ಐಡಿಹಳ್ಳಿ ಗ್ರಾಮದಿಂದ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯಕ್ಕೆ ಬಂದಿದ್ದ ಮದುವೆ ಬಸ್ ನಿನ್ನೆ ರಾತ್ರಿ ಮದುವೆ ಮುಗಿಸಿ ತೆರಳುವ ವೇಳೆಗೆ ಈ ಅವಘಡ ಸಂಭವಿಸಿದೆ. ಈ ಬಸ್ ವೃದ್ದೆಯೊಬ್ಬರಿಗೆ ಡಿಕ್ಕಿ ಹೊಡೆದು ಅದರಿಂದ ತಪ್ಪಿಸಿಕೊಳ್ಳಲು ಅತೀ ವೇಗದಿಂದ ಚಲಾಯಿಸದ ಪರಿಣಾಮ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬಸ್ ಮಗುಚಿ ಬಿದ್ದಿದೆ.

ಈ ಅವಘಡದಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು , ಉಳಿದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಂಭೀರ ಗಾಯಗೊಂಡ ಪ್ರಯಾ ಣಿಕರನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

- Advertisement -

Related news

error: Content is protected !!