- Advertisement -
- Advertisement -
ಮಹಿಳೆಯೊಬ್ಬಳು ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನ ಯಗಟಿಯಲ್ಲಿ ನಡೆದಿದೆ.
ಪತಿ ನವೀನ್ (28) ಮೃತ ದುರ್ದೈವಿ, ಪತ್ನಿ ಪಾವನಾ ಬಂಧಿತ ಆರೋಪಿ. ಗಂಡನಿಗೆ ಊಟದಲ್ಲಿ ನಿದ್ರೆ ಮಾತ್ರೆ ಹಾಕಿ ಜ್ಞಾನ ತಪ್ಪಿಸಿದ ಪಾವನಾ ಬಳಿಕ ಪ್ರೇಮಿಯ ಜೊತೆ ಬೈಕ್ನಲ್ಲಿ ಮೃತದೇಹವನ್ನು ತೆಗೆದುಕೊಂಡು ಹೋಗಿ ಕೆರೆಗೆ ಎಸೆದು ಬಂದಿದ್ದಾಳೆ. ಬಳಿಕ ಇದೊಂದು ಸಹಜ ಸಾವು ಎಂದು ನಾಟಕವಾಡಿದ್ದಾಳೆ. ಆಗಸ್ಟ್ 6ರಂದು ಯಗಟಿ ಕೆರೆ ಬಳಿ ನವೀನ್ ಮೃತದೇಹ ಪತ್ತೆಯಾಗಿದೆ. ನಂತರ ಇದು ಸಹಜ ಸಾವಲ್ಲ ಎಂದು ಪೋಷಕರು ದೂರು ನೀಡಿದ್ದಾರೆ.
ಪೋಷಕರ ದೂರಿನ ಆಧಾರದ ಮೇರೆಗೆ ತನಿಖೆ ಕೈಗೊಂಡ ಪೊಲೀಸರಿಗೆ ಇದು ಸಹಜ ಸಾವಲ್ಲ ಅನ್ನೋದು ಖಾತ್ರಿಯಾಗಿದೆ. ಪತ್ನಿ ಮೇಲೆ ಅನುಮಾನಗೊಂಡು ವಿಚಾರಣೆಗೆ ಒಳಪಡಿಸಿದ್ದಾರೆ. ನಂತರ ಪಾವನಾ, ಸಂಜಯ್ ಎಂಬಾತನನ್ನ ಪ್ರೀತಿಸುತ್ತಿದ್ದಳು. ಸಂಜಯ್ ಜೊತೆ ಸೇರಿಸಲು ನವೀನ್ ಅಡ್ಡಲಾಗಿದ್ದರಿಂದ ಪತಿಯನ್ನು ಸ್ಕೆಚ್ ಹಾಕಿ ಮುಗಿಸಿದ್ದಾಳೆ ಅನ್ನೋ ಸತ್ಯ ತನಿಖೆಯಲ್ಲಿ ಬಯಲಾಗಿದೆ.
- Advertisement -