- Advertisement -
- Advertisement -
ಚಿಕ್ಕಮಗಳೂರು: ಸರಕಾರಿ ಬಸ್ ಹತ್ತುವ ವೇಳೆ ಡೋರ್ ಲಾಕ್ ತುಂಡಾದ ಪರಿಣಾಮ ಮಹಿಳೆ ಬಸ್ನಿಂದ ಹೊರಗೆ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಐದಳ್ಳಿ ಗ್ರಾಮದ ಬಳಿ ನಡೆದಿದೆ.
ಬಸ್ ಚಿಕ್ಕಮಗಳೂರಿನಿಂದ ಶೃಂಗೇರಿಗೆ ತೆರಳುತ್ತಿದ್ದು ಶಕುಂತಳಮ್ಮ ಬಾಳೆಹೊನ್ನೂರಿಗೆ ತೆರಳಲು ಬಸ್ ಹತ್ತುವಾಗ ಬಸ್ನ ಬಾಗಿಲಿನ ಲಾಕ್ ತುಂಡಾಗಿದೆ ಪರಿಣಾಮ ಬಾಗಿಲು ಹಿಡಿದ್ದಿದ್ದ ಮಹಿಳೆ ಏಕಾಏಕಿ ಬಸ್ನಿಂದ ಹೊರಗೆ ಬಿದ್ದು ಗಾಯಗೊಂಡಿದ್ದಾರೆ. ಗಾಯಾಳು ಮಹಿಳೆಯನ್ನು ಆಲ್ಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಬಸ್ಸಿನ ಸರಿಯಾದ ನಿರ್ವಹಣೆ ಇಲ್ಲದೆ ಈ ರೀತಿ ಆಗಿದೆ ಎಂದು ಪ್ರಯಾಣಿಕರು ಹೇಳಿಕೊಂಡಿದ್ದು ಘಟನೆ ಬಗ್ಗೆ ಅಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -