Saturday, June 29, 2024
spot_imgspot_img
spot_imgspot_img

ಪುತ್ತೂರು : ನಾಪತ್ತೆಯಾಗಿರುವ ಹೋರಿಗಳ ಪತ್ತೆಗೆ ದೈವದ ಮೊರೆ ಹೋದ ಬಜರಂಗದಳದ ಕಾರ್ಯಕರ್ತರು

- Advertisement -G L Acharya panikkar
- Advertisement -
This image has an empty alt attribute; its file name is indane-gas-2-1024x748.jpg
This image has an empty alt attribute; its file name is VC_PUC_-1-819x1024.jpg

ಪುತ್ತೂರು : ಪುತ್ತೂರು ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ತಿರುಗಾಡುತ್ತಿದ್ದ ಹೋರಿಗಳೆರಡು ನಾಪತ್ತೆಯಾಗಿದ್ದು, ನಾಪತ್ತೆಯಾಗಿರುವ ಹೋರಿಗಳಿಗಾಗಿ ಬಜರಂಗದಳದ ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿದ ಬಳಿಕ ಇದೀಗ ದೈವದ ಮೊರೆ ಹೋಗಿದ್ದಾರೆ.

ಮಹಾಲಿಂಗೇಶ್ವರ ದೇವಸ್ಥಾನದ ಪರಿಸರ ಸಹಿತ ಪೇಟೆಯಲ್ಲಿ ಸುತ್ತಾಡುತ್ತಿದ್ದ ಎರಡು ಹೊರಿಗಳು ಮೇ. 1 ರಿಂದ ನಾಪತ್ತೆಯಾಗಿತ್ತು. ಇದು ಗೋ ಕಳ್ಳತನ ಮಾಡಿದವರ ಕೃತ್ಯವಾಗಿದ್ದು, ಸೂಕ್ತ ತನಿಖೆ ನಡೆಸುವಂತೆ ವಿಶ್ವಹಿಂದು ಪರಿಷತ್ ಬಜರಂಗದಳದಿಂದ ಮೇ.16ರಂದು ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದೀಗ ಸಂಘಟನೆಯ ಕಾರ್ಯಕರ್ತರು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವದ ಮೊರೆ ಹೋಗಿದ್ದಾರೆ. ಮೇ. 17ರಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಭಂಡಾರದ ಮನೆಯಲ್ಲಿ ಹೋರಿಗಳ ಪತ್ತೆಗಾಗಿ ವಿಶೇಷ ಪ್ರಾರ್ಥನೆ ಮಾಡಿದ್ದಾರೆ. ದೈವಸ್ಥಾನ ಅರ್ಚಕ ರವಿ ನೆಲ್ಲಿತ್ತಾಯ ಅವರು ಪ್ರಾರ್ಥನೆ ಮಾಡಿದರು.

- Advertisement -

Related news

error: Content is protected !!