- Advertisement -
- Advertisement -
ಮಂಗಳೂರು ನಗರದ ಮನೆಯೊಂದಲ್ಲಿ ಹೋಂ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಯುವತಿಯೋರ್ವಳು ಬೆಲೆಬಾಳುವ ಕರಿಮಣಿಯೊಂದಿಗೆ ಪರಾರಿಯಾದ ಘಟನೆ ನಗರದ ಕದ್ರಿ ಬಾರೆಬೈಲ್ ಎಂಬಲ್ಲಿ ನಡೆದಿದೆ.
ಮಂಡ್ಯ ಮೂಲದ ಯುವತಿಯೊಬ್ಬಳು ಮಂಗಳೂರಿನ ಕದ್ರಿ ಬಾರೆಬೈಲ್ ಎಂಬಲ್ಲಿನ ಮನೆಯೊಂದರಲ್ಲಿ ಹೋಂ ನರ್ಸ್ ಆಗಿ ಕೆಲಸ ಮಾಡುತ್ತಿದ್ದು, ಅನಾರೋಗ್ಯದ ನೆಪ ಹೇಳಿ ಹೋಗಿ ಊರಿಗೆ ಹೋಗಿ ಬರುತ್ತೇನೆ ಎಂಬುವುದಾಗಿ ಹೇಳಿ ಹೋಗಿದ್ದರು. ಸುಮಾರು 2 ಲಕ್ಷ ರೂ.ಮೌಲ್ಯದ 35 ಗ್ರಾಂ ತೂಕದ ಕರಿಮಣಿ ಸರ ಕಾಣೆಯಾಗಿದ್ದು ಈ ಬಗ್ಗೆ ಯುವತಿಯನ್ನು ಮನೆಯವರು ಸಂಪರ್ಕಿಸಿದ್ದು, ಸರಿಯಾಗಿ ಸ್ಪಂದಿಸುತ್ತಿರಲಿಲ್ಲ. ಹಾಗಾಗಿ ಯುವತಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನೆಯವರು ದೂರು ನೀಡಿದ್ದು, ಈ ಬಗ್ಗೆ ಪ್ರಕರಣ ದಾಖಲು ಮಾಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
- Advertisement -