Monday, June 30, 2025
spot_imgspot_img
spot_imgspot_img

ನೇಣು ಬಿಗಿದು ಯುವತಿ ಆತ್ಮಹತ್ಯೆಗೆ ಶರಣು..!

- Advertisement -
- Advertisement -

ಗರ್ಭಿಣಿಯೊಬ್ಬರು ಗಂಡನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ತಿರುವನಂತಪುರದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವತಿ ಕಲ್ಲಂಬಳಂ ಓತೂರ್‌ ನಿವಾಸಿ ಲಕ್ಷ್ಮಿ (19) ಎಂದು ಗುರುತಿಸಲಾಗಿದೆ.

ಬಿಎ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದರು. ಪತಿ ಕಿರಣ್ ಹಾಗೂ ಕುಟುಂಬದವರೊಂದಿಗೆ ಹೆಚ್ಚಿನ ವ್ಯಾಸಂಗ ವಿಚಾರದಲ್ಲಿ ಜಗಳ ನಡೆದಿತ್ತು ಎಂದು ವರದಿಯಾಗಿದೆ . ಪತಿಯೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಿದ್ದರು. 11 ತಿಂಗಳ ಹಿಂದೆ ಇಬ್ಬರೂ ಮದುವೆಯಾಗಿದ್ದರು. ಆಕೆ ಗರ್ಭಿಣಿ ಎಂಬ ಕಾರಣಕ್ಕೆ ಪತಿ ಆಕೆಗೆ ಓದದಂತೆ ನಿರ್ಬಂಧ ಹೇರಿದ್ದು, ಬಾಲಕಿ ಗರ್ಭಪಾತ ಮಾಡುವಂತೆ ಕೇಳಿಕೊಂಡಾಗ ಮನೆಯವರು ಒಪ್ಪಿರಲಿಲ್ಲ ಎನ್ನಲಾಗಿದೆ. ಇದರಿಂದ ಮನನೊಂದ ಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತೀರ್ಮಾನಿಸಿದ್ದಾರೆ. ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಅ

ವರ್ಕಳ ಎಸ್ಪಿ ನೇತೃತ್ವದ ವಿಧಿವಿಜ್ಞಾನ ತಂಡ ತನಿಖೆ ನಡೆಸುತ್ತಿದೆ. ವಿಚಾರಣೆ ಬಳಿಕ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಪ್ರಕ್ರಿಯೆ ಮುಗಿದ ನಂತರ ಸಂಬಂಧಿಕರಿಗೆ ಬಿಡುಗಡೆ ಮಾಡಲಾಗುವುದು. ಕಡೈಕ್ಕಾವೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.ಕಳೆದ ಕೆಲ ದಿನಗಳಿಂದ ಮುಂದಿನ ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು ಎಂದು ಸ್ಥಳೀಯರು ಹೇಳುತ್ತಾರೆ. ಇದು ಸಾವಿಗೆ ಕಾರಣವೇ ಎಂಬ ಬಗ್ಗೆಯೂ ತನಿಖೆ ನಡೆಸುವುದಾಗಿ ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!