Sunday, May 5, 2024
spot_imgspot_img
spot_imgspot_img

ಯುವತಿ ಅನುಮಾನಾಸ್ಪದವಾಗಿ ಮೃತ್ಯು,,!

- Advertisement -G L Acharya panikkar
- Advertisement -

ಯುವತಿಯೋರ್ವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಮಿಲ್ಲತ್ ನಗರದಲ್ಲಿ ನಡೆದಿದೆ.

ಮೃತಪಟ್ಟ ಮಹಿಳೆ ಮಾಹೇನೂರ್ ( 22) ಎಂದು ಗುರುತಿಸಲಾಗಿದೆ.

ವರದಕ್ಷಿಣೆ ಕಿರುಕುಳ ಹಿನ್ನೆಲೆಯಲ್ಲಿ ಗಂಡ ಸಯ್ಯದ್ ಶುಹೇಬ್ ಎಂಬಾತ ಪತ್ನಿಯ ಕತ್ತುಹಿಸುಕಿ ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಕಳೆದ ಎರಡು ವರ್ಷಗಳ ಹಿಂದೆ ಇಬ್ಬರು ಮದುವೆಯಾಗಿದ್ದರು. ವರದಕ್ಷಿಣೆಗಾಗಿ ಪತ್ನಿಗೆ ಪತಿ ಸಯ್ಯದ್ ಶುಹೇಬ್ ಆಗಾಗ ಕಿರುಕುಳ ನೀಡುತ್ತಿದ್ದನಂತೆ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಗಲ್ ಪೇಟೆ ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈ ಘಟನೆಯ ಬಗ್ಗೆ ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!