Saturday, May 4, 2024
spot_imgspot_img
spot_imgspot_img

ತಿರುಪತಿ ದರ್ಶನಕ್ಕೆಂದು ತೆರಳಿದ ಸಂದರ್ಭ ಮನೆಯ ಬೀಗ ಒಡೆದು ಕಳ್ಳತನ

- Advertisement -G L Acharya panikkar
- Advertisement -

ಮನೆಯವರು ತಿರುಪತಿ ಯಾತ್ರೆಗೆ ತೆರಳಿದ್ದ ಸಂದರ್ಭ ಕಳ್ಳರು ಮನೆಯ ಬೀಗ ಒಡೆದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ಕುಂದಾಪುರ ತಾಲೂಕಿನ ಸಿದ್ದಾಪುರ ಸಮೀಪದ ಜನ್ಸಾಲೆ ಎಂಬಲ್ಲಿ ಸಂಭವಿಸಿದೆ.

ಸುಕನ್ಯಾ ಕಿಣಿ ಎಂಬವರು ತಿರುಪತಿ ದರ್ಶನಕ್ಕೆಂದು ತೆರಳಿದ್ದರು. ಕುಂದಾಪುರ-ಸಿದ್ದಾಪುರ ಮುಖ್ಯ ರಸ್ತೆ ಸಮೀಪದಲ್ಲೇ ಸುಕನ್ಯಾರ ಮನೆಯಿದ್ದು ತಿರುಪತಿ ದರ್ಶನ ಮುಗಿಸಿ ಬಂದಾಗ ಮನೆಯ ಮುಖ್ಯ ದ್ವಾರದ ಬೀಗ ಒಡೆದು ಬಾವಿಗೆ ಎಸೆದಿರುವುದು ತಿಳಿದುಬಂದಿದೆ. ಮನೆಯ ಒಳಗಿನ ಕಪಾಟಿನಲ್ಲಿದ್ದ 5 ಪವನ್ ತೂಕದ ಮುತ್ತಿನ ಹವಳ ಮಿಶ್ರಿತ ಚಿನ್ನ ಒಂದು ಪವನ್ ಚಿನ್ನದ ನಾಣ್ಯ ಹತ್ತು ಸಾವಿರ ರೂ. ನಗದು ಹಾಗೂ ಬೆಳ್ಳಿ ಸಾಮಗ್ರಿಗಳು ಕಳವಾಗಿರುವುದು ಬೆಳಕಿಗೆ ಬಂದಿದೆ.

ಸ್ಥಳಕ್ಕೆ ಶಂಕರನಾರಾಯಣ ಠಾಣೆ ಉಪನಿರೀಕ್ಷಕ ನಾಸಿರ್ ಹುಸೇನ್ ಹಾಗೂ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದ್ದು ತನಿಖೆ ನಡೆಯುತ್ತಿದೆ.

- Advertisement -

Related news

error: Content is protected !!