Sunday, June 29, 2025
spot_imgspot_img
spot_imgspot_img

ಪಶ್ಚಿಮ ಬಂಗಾಳ: ತೇಜಸ್ವಿ ಸೂರ್ಯ ಭಾಗಿಯಾಗಿದ್ದ ಪ್ರತಿಭಟನೆ ಮೇಲೆ ನಾಡ ಬಾಂಬ್‌ ಎಸೆತ

- Advertisement -
- Advertisement -


ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುಖಂಡರ ಹತ್ಯೆಯನ್ನು ಖಂಡಿಸಿ ಇಂದು ಬೆಂಗಳೂರು ಸಂಸದ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತೇಜಸ್ವಿ ಸೂರ್ಯ ನೇತೃತ್ವದಲ್ಲಿ ಕೋಲ್ಕತ್ತಾದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯ ಮೇಲೆ ನಾಡ ಬಾಂಬ್ ಎಸೆಯಲಾಗಿದೆ.ಈ ಕೃತ್ಯವನ್ನು ಟಿಎಂಸಿ ಗೂಂಡಾಗಳು ಎಸಗಿದ್ದಾರೆ ಎಂದು ಶಂಕಿಸಲಾಗಿದೆ.

ಇತ್ತೀಚಿಗೆ ಬಿಜೆಪಿ ಮುಖಂಡ ಮನೀಶ್‌ ಶುಕ್ಲಾ ಅವರನ್ನು ಪಶ್ಚಿಮ ಬಂಗಾಳದಲ್ಲಿ ಹತ್ಯೆ ಮಾಡಲಾಗಿತ್ತು. ಇದನ್ನು ಖಂಡಿಸಿ ಇಂದು ನೂರಾರು ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆಯನ್ನು ನಡೆಸಿದ್ದಾರೆ. ಈ ಸಂದರ್ಭದಲ್ಲಿ ನಾಡ ಬಾಂಬ್ ಅನ್ನು ಎಸೆಯಲಾಗಿದೆ.

ಪೊಲೀಸರು ಪ್ರತಿಭಟನೆಯನ್ನು ಹತ್ತಿಕ್ಕಲು ಪ್ರಯತ್ನಿಸಿದ್ದಾರೆ. ಅಶ್ರುವಾಯು ಪ್ರಯೋಗ ಮಾಡಿದ್ದಾರೆ. ಈ ಮೂಲಕ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಬಲ ಪ್ರಯೋಗ ಮಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಟಿಎಂಸಿ ಗೂಂಡಾಗಳು ಟೆರೇಸ್ ಮೇಲೆ ನಿಂತು ಬಾಂಬ್‌ ಎಸೆದಿದ್ದಾರೆ ಎಂದು ತೇಜಸ್ವಿ ಸೂರ್ಯ ತಮ್ಮ ಟ್ವಿಟರ್‌ನಲ್ಲಿ ಆರೋಪಿಸಿದ್ದಾರೆ.

- Advertisement -

Related news

error: Content is protected !!