Saturday, June 28, 2025
spot_imgspot_img
spot_imgspot_img

ತಿಂಗಳಾಡಿ:-ತಂದೆ ಮಗನ ನಡುವೆ ಜಗಳ:ಗಂಭೀರ ಗಾಯಗೊಂಡ ತಂದೆ ಸಾವು.!

- Advertisement -
- Advertisement -

ಪುತ್ತೂರು: ತಂದೆ ಮತ್ತು ಮಗನ ನಡುವೆ ಜಗಳ ನಡೆದು ಗಂಭೀರ ಗಾಯಗೊಂಡ ತಂದೆ ಆಸ್ಪತ್ರೆ ದಾರಿಯಲ್ಲಿ ಮೃತಪಟ್ಟ ಘಟನೆ ನಡೆದಿದೆ.ಕೆದಂಬಾಡಿ ಗ್ರಾಮದ ತಿಂಗಳಾಡಿ ಬಾಲಯ ಬಳಿ ಈ ಘಟನೆ ನಡೆದಿರುವುದಾಗಿ ವರದಿಯಾಗಿದೆ.

ಸೋಮವಾರ ರಾತ್ರಿ ಗಂಗಾಧರ್ ನಾಯ್ಕ್ ಹಾಗೂ ಅವರ ಪುತ್ರ ಶಶಿಧರ್ ನಡುವೆ ಯಾವುದೋ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಘರ್ಷಣೆ ಸಂಭವಿಸಿದೆ.ಈ ಸಂದರ್ಭದಲ್ಲಿ ಗಂಗಾಧರ್ ನಾಯ್ಕ್ ಗಂಭೀರವಾಗಿ ಗಾಯಗೊಂಡರು. ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.ಘರ್ಷಣೆಯಲ್ಲಿ ಪುತ್ರ ಶಶಿಧರ್ ಅವರಿಗೂ ಗಾಯಗಳಾಗಿದ್ದು ಆತನನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.ಪೊಲೀಸ್ ತನಿಖೆ ಯಿಂದ ಖಚಿತ ಮಾಹಿತಿ ಬಹಿರಂಗವಾಗಬೇಕಿದೆ.ಘಟನೆಯೂ ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

- Advertisement -

Related news

error: Content is protected !!