- Advertisement -
- Advertisement -
ವಿಟ್ಲ ಕಸಬಾ ಗ್ರಾಮದ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ವಿಟ್ಲ- ಕಾಸರಗೋಡು ರಸ್ತೆಯ ಎಂಆರ್ ನಾಯಕ್ ಪಂಪ್ ಹತ್ತಿರ ಬೀದಿನಾಯಿಗಳ ಕಾಟ ಹೆಚ್ಚಾಗಿದ್ದು, ವಾಹನ ಸವಾರರಿಗೆ ಹಾಗೂ ಪಾದಾಚರಿಗಳಿಗೆ ಸಂಚರಿಸಲು ತೊಂದರೆಯಾಗುತ್ತಿದೆ.
ಈ ಹಿಂದೆ ವಿಟ್ಲ ಪಟ್ಟಣ ಪಂಚಾಯತ್ಗೆ ಹಾಗೂ ವಿಟ್ಲ ಪಶು ಆರೋಗ್ಯ ಇಲಾಖೆಯವರಿಗೆ ಈ ಬಗ್ಗೆ ದೂರು ನೀಡಲಾಗಿದ್ದು, ಈ ಬಗ್ಗೆ ಯಾವುದೇ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಂಡಿಲ್ಲ ಎಂಬುವುದು ಪಾದಾಚಾರಿಗಳ, ವಾಹನ ಸವಾರರ ಹಾಗೂ ಸಾರ್ವಜನಿಕರ ಆಕ್ರೋಶವಾಗಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಮನವಿ ಮಾಡಿದ್ದಾರೆ.
- Advertisement -