

ಮಂಗಳೂರು: ಬಡಾವಣೆಯ ಮನೆಯೊಂದರ ಮುಖ್ಯಗೇಟ್ ತೆಗೆದು ಒಳನುಗ್ಗಿರುವ ಕಳ್ಳರು ಬಾಗಿಲಿನ ಬಳಿ ಇದ್ದ ಇನ್ನೊಂದು ಸ್ಟೀಲ್ ಗೇಟ್ನ್ನು ತೆರೆದು ಮನೆಯ ಬಾಗಿಲನ್ನು ರಾಡ್ನಿಂದ ಒಡೆಯಲು ಯತ್ನಿಸಿರುವ ಘಟನೆ ಶನಿವಾರ ರಾತ್ರಿ ಪದವಿನಂಗಡಿ ಸಮೀಪದ ಮಹಾತ್ಮನಗರ ನಡೆದಿದೆ.
ರಾತ್ರಿ 1.45 ರ ವೇಳೆಗೆ ಈ ಘಟನೆ ನಡೆದಿದ್ದು, ಈ ವೇಳೆ ಎಚ್ಚರಗೊಂಡು ಎಲ್ಲ ಲೈಟ್ ಹಾಕಿ ಮನೆ ಮಂದಿ ಕೂಗಿಕೊಂಡಾಗ ಕಳ್ಳರು ಓಡಿ ಹೋಗಿದ್ದಾರೆ. ತಕ್ಷಣ ಮನೆಯವರು ಪೊಲೀಸರು ಹಾಗೂ ನೆರೆಮನೆಯವರಿಗೆ ಮಾಹಿತಿ ನೀಡಿದ್ದಾರೆ. ಕಾವೂರು ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇನ್ನು ಶನಿವಾರ ತಡರಾತ್ರಿ ನಾಲ್ವರ ತಂಡ ಪದವಿನಂಗಡಿಯ ಪೆರ್ಲಗುರಿಯ ಪ್ರಸನ್ನ ಗಣಪತಿ ದೇವಸ್ಥಾನದಿಂದ ಕಳವಿಗೆ ಯತ್ನಿಸಿರುವ ಘಟನೆ ವರದಿಯಾಗಿದೆ. ದೇವಸ್ಥಾನದ ಬಳಿ ಓಡಾಡುತ್ತಿದ್ದ ಕಳ್ಳರ ಕೈಯಲ್ಲಿದ್ದ ಟಾರ್ಚ್ ಬೆಳಕು ದೇವಸ್ಥಾನದ ಪಕ್ಕದ ಮನೆಯವರಿಗೆ ಕಂಡು ಅವರು ಎಚ್ಚರಗೊಂಡರು ಎನ್ನಲಾಗಿದೆ. ಮನೆಯ ಹೊರಭಾಗದ ಲೈಟ್ಗಳನ್ನು ಅವರು ಹಾಕಿದಾಗ ಕಳ್ಳರು ಪರಾರಿಯಾದರು ಎಂದು ತಿಳಿದು ಬಂದಿದೆ.