- Advertisement -
- Advertisement -
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಕುಟುಂಬಸ್ಥರು ಇಂದು ಮುಂಜಾನೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಈ ವೇಳೆ ಆಂಧ್ರಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಸಹ ಉಪಸ್ಥಿತರಿದ್ದರು. ಇದೇ ವೇಳೆ ಸಿಎಂ ಯಡಿಯೂರಪ್ಪ, ಪುತ್ರ ವಿಜಯೇಂದ್ರ ಹಾಗೂ ಪುತ್ರಿ ಪದ್ಮಾವತಿಯವರನ್ನು ಜಗನ್ ಗೌರವಿಸಿದರು.
ನಿನ್ನೆ ತಿರುಪತಿಗೆ ಪ್ರಯಾಣ ಬೆಳಸಿದ ಬಿಎಸ್ವೈ ಕುಟುಂಬ ಸಂಜೆ ಶ್ರೀ ವೆಂಕಟೇಶ್ವರ ದೇವಸ್ಥಾನಕ್ಕೆ ಮೆರವಣಿಗೆಯಲ್ಲಿ ತೆರಳಿ ಸರ್ಕಾರದ ಪರವಾಗಿ ವಾರ್ಷಿಕ ಬ್ರಹ್ಮೋತ್ಸವದ ಸಂದರ್ಭದಲ್ಲಿ ಸಾಂಪ್ರದಾಯಿಕ ಪಟ್ಟ ವಸ್ತ್ರಗಳನ್ನು ಸಮರ್ಪಿಸಿದ್ದಾರೆ.
- Advertisement -