Tuesday, March 19, 2024
spot_imgspot_img
spot_imgspot_img

ತಿರುಪತಿ ವೆಂಕಟೇಶ್ವರ ದೇವಾಲಯ ಹುಂಡಿ ಕಾಣಿಕೆ ಸಂಗ್ರಹದಲ್ಲಿ ಹೊಸ ದಾಖಲೆ

- Advertisement -G L Acharya panikkar
- Advertisement -

ತಿರುಪತಿ ಶ್ರೀ ವೆಂಕಟೇಶ್ವರನಿಗೆ ಭಕ್ತರು ದೇಶ ಮಾತ್ರವಲ್ಲದೇ ವಿದೇಶಗಳಿಂದಲೂ ಸಹ ದರ್ಶನ ಪಡೆಯಲು ಆಗಮಿಸುತ್ತಾರೆ. ಈ ಬಾರಿ ಮಾತ್ರ ಕೊರೋನಾ ಮಾಹಾ ಮಾರಿಯಿಂದಾಗಿ ಕೆಲ ತಿಂಗಳ ಕಾಲ ದೇವಾಲಯವನ್ನು ಮುಚ್ಚಲಾಗಿತ್ತು. ಕೆಲವು ಮುಂಜಾಗ್ರತಾ ಮತ್ತು ಸುರಕ್ಷತಾ ಕ್ರಮಗಳೊಂದಿಗೆ ಮತ್ತೆ ದೇವಾಲಯವನ್ನು ತೆರೆಯಲಾಗಿದ್ದು, ಭಾರೀ ಪ್ರಮಾಣದ ಭಕ್ತರು ಆಗಮಿಸಿ ತಿಮ್ಮಪ್ಪನ ದರ್ಶನ ಪಡೆಯುತ್ತಿದ್ದಾರೆ.

ಈ ನಡುವೆ ತಿರುಪತಿ ವೆಂಕಟೇಶ್ವರ ದೇವಾಲಯ ಹುಂಡಿ ಕಾಣಿಕೆ ಸಂಗ್ರಹದಲ್ಲಿ ಹೊಸ ದಾಖಲೆ ಬರೆದಿದೆ. ಅಕ್ಟೋಬರ್ 2ರಂದು ಗಾಂಧಿ ಜಯಂತಿಗೆ ರಜೆ ಇದ್ದ ಕಾರಣ ಅಸಂಖ್ಯಾತ ಭಕ್ತರು ದೇವಾಲಯಕ್ಕೆ ಆಗಮಿಸಿದ್ದರು. ಆ ದಿನ ಸುಮಾರು 2.14 ಕೋಟಿ ರೂ.ಹುಂಡಿ ಹಣ ಸಂಗ್ರಹವಾಗಿದೆ. ಒಂದೇ ದಿನ ಇಷ್ಟು ಹಣ ಸಂಗ್ರಹವಾಗಿರುವುದು ಇದೇ ಮೊದಲು ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!