- Advertisement -
- Advertisement -
ಮೂವರು ಯುವಕರು ರೈಲಿಗೆ ಸಿಲುಕಿ ಸಾವಿಗೀಡಾದ ದಾರುಣ ಘಟನೆ ಬೆಂಗಳೂರಿನ ಮಾರತ್ತಹಳ್ಳಿ ರೈಲ್ವೇ ನಿಲ್ದಾಣದ ಬಳಿ ನಡೆದಿದೆ.
ಮೃತರನ್ನು ಆಂಧ್ರಪ್ರದೇಶದ ಚಿತ್ತೂರು ಮೂಲದ ಶಶಿಕುಮಾರ್ (23) ಲೋಕೇಶ್ (25) ಎಂದು ತಿಳಿದು ಬಂದಿದೆ.
ಇಂದು ಬೆಳಗ್ಗೆ ಸಾರ್ವಜನಿಕರು ಬೈಯಪ್ಪನಹಳ್ಳಿ ರೈಲ್ವೆ ಪೊಲೀಸರಿಗೆ ಯುವಕರ ಮೃತದೇಹ ಪತ್ತೆಯಾದ ಬಗ್ಗೆ ಮಾಹಿತಿ ನೀಡಿದ್ದಾರೆ. ಅವಘಡದಲ್ಲಿ ಸಾವಿಗೀಡಾದ ಮತ್ತೋರ್ವನ ಗುರುತು ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.
ಬೈಯಪ್ಪನಹಳ್ಳಿ ರೈಲ್ವೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯುವಕರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
- Advertisement -